3:55 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಪತಿ-ಪತ್ನಿ ಮಧ್ಯೆ ಮನಸ್ತಾಪ: ಗಂಡ ನೇಣಿಗೆ ಶರಣು; ಅಂತ್ಯ ಸಂಸ್ಕಾರಕ್ಕೂ ಬಾರದ ಸತಿ!!

05/03/2022, 09:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಂಡ ಹೆಂಡಿರು ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಬ್ಬ ಗಂಡ ಪತ್ನಿಯ ವಿಷಯದಲ್ಲಿ ಮನನೊಂದ ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ.

ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸುನೀಲ ಅರ್ಜುನ್ ಹೊಕ್ಕುಂಡಿ”(26) ಆತ್ಮಹತ್ಯೆಗೆ ಶರಣಾದ ಯುವಕ.

ಒಂದು ವರ್ಷದ ಹಿಂದೆ ಅಷ್ಟೇ ಮಹಾರಾಷ್ಟ್ರದ ಸಾಂಗ್ಲಿ ನಗರದ ಯೋಗೀತಾ ಜೋತೆ ಸುನೀಲ ವಿವಾಹವಾಗಿತ್ತು. ಮದುವೆಯ ನಂತರ ಆರು ತಿಂಗಳ ವರೆಗೆ ದಾಂಪತ್ಯ ಜೀವನ ಚನ್ನಾಗಿಯೇ ನಡೆದಿತ್ತು. ಸುನೀಲ ತನ್ನ ದಿನನಿತ್ಯದ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡು ತಂದೆ,ತಾಯಿ ಹಾಗೂ ಒಬ್ಬ ಸಹೋದರನ ಜತೆ ಒಂದೇ ಕುಟುಂಬದಲ್ಲಿ ವಾಸವಿದ್ದರೂ.

ಎರಡು ತಿಂಗಳ ಹಿಂದೆ ಸುನೀಲ ಪತ್ನಿ ಯೋಗೀತಾ  ತವರಮನೆಗೆ ಹೋಗಿ ಬರುತ್ತೇನೆ ಅಂತಾ ಹೋದವಳು ನಂತರ ಮರಳಿ ಗಂಡನ ಮನೆಗೆ ಬರಲು ನಿರಾಕರಿಸಿದ್ದಾಳೆ. ಸುನೀಲ ತಂದೆ ತಾಯಿ ಕೂಡಾ ಯೋಗೀತಾ ಬರಲು ಮನವಲಿಸಿದರು ಕೂಡಾ ಬಾರಲು ನಿರಾಕರಿದದಕ್ಕೆ ಮನ ನೊಂದು ಸುನೀಲ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. 

ಮೃತನ ಪತ್ನಿ ಯೋಗೀತಾ ಕೊನೆಯ ಪಕ್ಷ ಅಂತ್ಯ ಸೌಂಸ್ಕಾರಕ್ಕೂ ಬಾರದೆ ಇರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು ಮೃತ ಸುನೀಲ ತಂದೆ ಅರ್ಜುನ್ ಹೊಕ್ಕುಂಡಿ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು