7:02 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕೊರೊನಾ ಹೆಚ್ಚಳ: ರಾಯಚೂರು ಜಿಲ್ಲೆಯಾದ್ಯಂತ  ಇಂದಿನಿಂದ ಜೂನ್ 11ರ ವರೆಗೆ ಕಠಿಣ ನಿರ್ಬಂಧ

08/06/2021, 06:45

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ರಾಯಚೂರು ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತು ಹೊರತುಪಡಿಸಿ ನಾಳೆಯಿಂದ(ಜೂನ್ 8) ಜೂನ್ 11ರ ವರೆಗೆ

ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್, ಅಗ್ನಿ ಶಾಮಕ, ವಿದ್ಯುತ್, ಪೆಟ್ರೋಲ್ ಪಂಪ್, ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು ಹಾಗೂ ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ದಿನಾಂಕ 08-06-2021(ಮಂಗಳವಾರ) ಮದ್ಯಾಹ್ನ 02-00 ಗಂಟೆಯಿಂದ 11-06-2021 (ಶುಕ್ರವಾರ) ರಾತ್ರಿ 12.00 ಗಂಟೆವರೆಗೆ ಈ  ಸಂಪೂರ್ಣ ನಿರ್ಬಂಧ ಜಾರಿಯಲ್ಲಿರುತ್ತದೆ.

ಬ್ಯಾಂಕ್ ಗಳು ಮತ್ತು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ನೋಂದಣಾಧಿಕಾರಿ ಹಾಗೂ ಉಪ ನೋಂದಣಾಧಿಕಾರಿ ಕಚೇರಿಗಳು ಬೆಳಿಗ್ಗೆ 7.30 ಗಂಟೆಯಿಂದ 10.00ಗಂಟೆವರೆಗೆ ಕಾರ್ಯನಿರ್ವಹಿಸಲು ಮಾತ್ರ ಅನುಮತಿಸಲಾಗಿದೆ. ಮತ್ತು ಮದುವೆಗಳನ್ನು ನಿರ್ಬಂಧಿಸಲಾಗಿರುತ್ತದೆ. 

ಇತ್ತೀಚಿನ ಸುದ್ದಿ

ಜಾಹೀರಾತು