7:26 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಪೋಲೆಂಡ್ ತಲುಪಿದ ಗೋಣಿಕೊಪ್ಪದ ಶೀತಲ್ ಸಂಪತ್: ಯುದ್ಧಪೀಡಿತ ಉಕ್ರೇನ್’ನಿಂದ ಪಯಣ

05/03/2022, 10:52

ಮಡಿಕೇರಿ(reporterkarnataka.com):

ಯುದ್ಧಗ್ರಸ್ತ ಯುಕ್ರೇನ್ ದೇಶದ ಕಾರ್ವೀಕ್ ಪಟ್ಟಣದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ಜಿಲ್ಲೆಯ ಯುವತಿ ಸುರಕ್ಷಿತವಾಗಿ ಪಕ್ಕದ ದೇಶದ ಪೋಲೆಂಡ್’ನ್ನು ತಲುಪಿದ್ದಾರೆ.

ಗೋಣಿಕೊಪ್ಪ ನಿವಾಸಿ ಪ್ರಸ್ತುತ ಕತಾರ್’ನಲ್ಲಿರುವ ಬಲ್ಲಡಿಚಂಡ ಸಂಪತ್ ಅವರ ಪುತ್ರಿ ಶೀತಲ್ ಸಂಪತ್ ಕಾರ್ವಿಕ್ ಪಟ್ಟಣದಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಪದವಿ ಪಡೆಯಲು ತೆರಳಿದ್ದರು.

ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭಗೊಂಡ ನಂತರ ಮರಳಿ ತವರು ನೆಲಕ್ಕೆ ಬರಲು ಯತ್ನಿಸಿದ್ದರು. ಆದರೆ ಇವರು ಸೇರಬೇಕಾಗಿದ್ದ ನೆಲೆ ಹಲವು ಸಾವಿರ ಕಿ.ಮೀ. ಇದ್ದುದರಿಂದ ಯಶಸ್ವಿಯಾಗಿರಲಿಲ್ಲ.

ಆದರೆ ಈ ಬಾರಿ ಶೀತಲ್ ಸಂಪತ್ ಕಾರ್ವಿಕ್ ಪಟ್ಟಣದಿಂದ ಅಂದಾಜು 1,300 ಕಿ ಮೀ ದೂರದ ಪೋಲೆಂಡ್ ದೇಶವನ್ನು ಬುಧವಾರ ತಲುಪಿದ್ದು, ಸದ್ಯ ಭಾರತೀಯ ದೂತಾವಾಸ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದಾರೆ.

ಪೋಲೆಂಡ್ ದೇಶದಲ್ಲಿರುವ ಭಾರತ ರಾಯಭಾರಿ ಕಚೇರಿಯು ಉಕ್ರೇನ್ ದೇಶದಿಂದ ಆಗಮಿಸುತ್ತಿರುವ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸುತ್ತಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಏರ್ ಲಿಫ್ಟ್ ಆಗುವ ಆಶಾಭಾವನೆಯನ್ನು ಶೀತಲ್ ಸಂಪತ್ ವ್ಯಕ್ತಪಡಿಸಿದ್ದಾರೆ.

ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮಕ್ಕಾಗಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾಧ್ಯ ಸಿಂಧ್ಯಾ ಪೋಲೆಂಡ್’ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಶೀತಲ್ ಅವರು ಭಾರತಕ್ಕೆ ಆಗಮಿಸಿದ‌ ಬಳಿಕ ಕತಾರ್’ಗೆ ತೆರಳಿ ತಂದೆಯನ್ನು ಸೇರಿಕೊಳ್ಳಲಿರುವುದಾಗಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು