7:03 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಚೆನ್ನೈ; 542 ಕೋಟಿ ಅಕ್ರಮ ಹಣ ವರ್ಗಾವಣೆ; ಚೆನ್ನೈ ಉದ್ಯಮಿ ಬಂಧಿಸಿದ ಈಡಿ

05/03/2022, 17:52

ಚೆನ್ನೈ(reporterkarnataka.com): 542 ಕೋಟಿ ರೂಪಾಯಿ ಮೊತ್ತದ  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಚೆನ್ನೈ ಮೂಲದ ಕೋಸ್ಟಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಸಿಇಪಿಎಲ್) ಪ್ರವರ್ತಕ ಅಹ್ಮದ್ ಎಆರ್ ಬುಹಾರಿ ಅವರನ್ನು ಜಾರಿ ನಿರ್ದೇಶನಾಲಯ(ಈಡಿ) ಬಂಧಿಸಿದೆ.

ಅಹ್ಮದ್ ಅವರು ಆಮದು ಮಾಡಿಕೊಂಡ ಕಲ್ಲಿದ್ದಲಿನ ಬೆಲೆ  ಹೆಚ್ಚಳ ಮಾಡಿ, ನಂತರ ಅದನ್ನು ಸಾರ್ವಜನಿಕ ವಲಯದ ಉದ್ಯಮಗಳಿಗೆ (ಪಿಎಸ್‌ಯು) ಪೂರೈಸಲಾಗಿದೆ ಎಂದು ಈಡಿ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.

ಕಲ್ಲಿದ್ದಲನ್ನು  ಸಿಇಪಿಎಲ್  ನಿಂದ ನೇರವಾಗಿ ಅಥವಾ ಮಿನರಲ್ಸ್ ಮತ್ತು ಮೆಟಲ್ಸ್ ಟ್ರೇಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಂಎಂಟಿಸಿ) ಮೂಲಕ ಸರಬರಾಜು ಮಾಡಲ್ಪಟ್ಟಿದೆ, ಇದು ಕಡಿಮೆ ಕ್ಯಾಲೋರಿಫಿಕ್ ಮೌಲ್ಯವನ್ನು ಹೊಂದಿದೆ.

ಮಾದರಿ ಹಾಗೂ  ವಿಶ್ಲೇಷಣೆಯ (ಸಿಒಎಸ್ ಎ) ನಕಲಿ ಪ್ರಮಾಣಪತ್ರವನ್ನು ಸಲ್ಲಿಸುವ ಮೂಲಕ ಬುಹಾರಿ ಕಲ್ಲಿದ್ದಲಿನ ಗುಣಮಟ್ಟದ ಬಗ್ಗೆ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.

ಈ ಕೆಳ ದರ್ಜೆಯ ಕಲ್ಲಿದ್ದಲಿಗೆ ಅಧಿಕ ಬೆಲೆ ನೀಡಿ ಬುಹಾರಿ 548 ಕೋಟಿ ರೂ.ಗಳನ್ನು ಗಳಿಸಿದ್ದಾರೆ. ಯುಎಇಯಲ್ಲಿನ ಸಿಇಪಿಎಲ್ ಮತ್ತು ಸಿಎನ್‌ಒ ಗ್ರೂಪ್ ಘಟಕಗಳ ಮೂಲಕ ಹಣವನ್ನು ಬೇರೆಡೆಗೆ ತಿರುಗಿಸಿದ್ದಾರೆ ಎಂದು ಈಡಿ ತನಿಖೆಯಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು