5:35 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರೀ ಇಳಿಕೆ ಕಂಡ ಕೊರೊನಾ ಪ್ರಕರಣ: 278 ಪಾಸಿಟಿವ್ ಕೇಸ್ ಪತ್ತೆ; 3 ಜನ ಸಾವು

06/03/2022, 08:29

ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,286ಕ್ಕೆ ಇಳಿಕೆಯಾಗಿದೆ ರಾಜ್ಯದ ಸಕಾರಾತ್ಮಕತೆ ದರ 0.53% ಮತ್ತು ಮರಣ ಪ್ರಮಾಣ 1.07%ಗೆ ಕುಸಿದಿದೆ.

ಬೆಂಗಳೂರು ನಗರದಲ್ಲಿ ಹೊಸದಾಗಿ 182 ಕೊರೊನಾ ಸೋಂಕು ದಾಖಲಾಗಿದೆ ಹಾಗೂ ಒಬ್ಬರು ಮೃತಪಟ್ಟಿದ್ದಾರೆ. 2,419 ಸಕ್ರಿಯ ಪ್ರಕರಣಗಳಿವೆ. 8 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ಜಿಲ್ಲಾವಾರು ಸೋಂಕಿನ ಮಾಹಿತಿ:

ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 182, ಬೀದರ್ 3, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 4, ಹಾವೇರಿ 4, ಕಲಬುರಗಿ 8, ಕೊಡಗು 7, ಕೋಲಾರ 4, ಕೊಪ್ಪಳ 1, ಮಂಡ್ಯ 0, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 14, ತುಮಕೂರು 5, ಉಡುಪಿ 4, ಉತ್ತರ ಕನ್ನಡ 4, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಸೋಂಕು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು