3:04 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರೀ ಇಳಿಕೆ ಕಂಡ ಕೊರೊನಾ ಪ್ರಕರಣ: 278 ಪಾಸಿಟಿವ್ ಕೇಸ್ ಪತ್ತೆ; 3 ಜನ ಸಾವು

06/03/2022, 08:29

ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,286ಕ್ಕೆ ಇಳಿಕೆಯಾಗಿದೆ ರಾಜ್ಯದ ಸಕಾರಾತ್ಮಕತೆ ದರ 0.53% ಮತ್ತು ಮರಣ ಪ್ರಮಾಣ 1.07%ಗೆ ಕುಸಿದಿದೆ.

ಬೆಂಗಳೂರು ನಗರದಲ್ಲಿ ಹೊಸದಾಗಿ 182 ಕೊರೊನಾ ಸೋಂಕು ದಾಖಲಾಗಿದೆ ಹಾಗೂ ಒಬ್ಬರು ಮೃತಪಟ್ಟಿದ್ದಾರೆ. 2,419 ಸಕ್ರಿಯ ಪ್ರಕರಣಗಳಿವೆ. 8 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ಜಿಲ್ಲಾವಾರು ಸೋಂಕಿನ ಮಾಹಿತಿ:

ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 182, ಬೀದರ್ 3, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 4, ಹಾವೇರಿ 4, ಕಲಬುರಗಿ 8, ಕೊಡಗು 7, ಕೋಲಾರ 4, ಕೊಪ್ಪಳ 1, ಮಂಡ್ಯ 0, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 14, ತುಮಕೂರು 5, ಉಡುಪಿ 4, ಉತ್ತರ ಕನ್ನಡ 4, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಸೋಂಕು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು