2:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮೇಕೆದಾಟು ಯೋಜನೆ; ಮಧ್ಯಸ್ಥಿಕೆಗೆ ಕೇಂದ್ರ ಸರಕಾರ ಸಿದ್ಧ: ಸಚಿವ ಗಜೇಂದ್ರ ಸಿಂಗ್ ಶೇಖಾವತ್

06/03/2022, 10:25

ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಆಗಲಿ ಅನ್ನೋ ಆಶಯ ನಾನು ವ್ಯಕ್ತಪಡಿಸುತ್ತೇನೆ. ಎರಡೂ ರಾಜ್ಯಗಳು ಕೂತು ಮಾತನಾಡಿದರೆ ಯೋಜನೆ ಆರಂಭವಾಗಲಿದೆ. ಇದಕ್ಕೆ ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಲು ಸಿದ್ಧವಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಯೋಜನೆಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದಿನ ಸಭೆಯಲ್ಲಿ ಮೇಕೆದಾಟು ಯೋಜನೆಯ ವಿಚಾರ ಇರಲಿಲ್ಲ. ಹಾಗಾಗಿ ಅದರ ಬಗ್ಗೆ ಚರ್ಚೆ ಮಾಡಿಲ್ಲ, ಈ ಬಗ್ಗೆ ಹೇಳಲು ಸಾಧ್ಯವಿಲ್ಲ. ಜೊತೆಗೆ ಪ್ರಕರಣ ಕೋರ್ಟ್‌ನಲ್ಲಿದೆ. ಹಾಗಾಗಿ ನಾನು ಈ ಕುರಿತು ಮಾತನಾಡುವುದಿಲ್ಲ ಎಂದ ಕೇಂದ್ರ ಸಚಿವರು, ಮೇಕೆದಾಟು ಯೋಜನೆಗೆ ರಾಜ್ಯ ಸರಕಾರ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿ, ಯೋಜನೆ ಆಗಬೇಕೆನ್ನುವುದು ನನ್ನ ಅಪೇಕ್ಷೆಯೂ ಆಗಿದೆ ಎಂದು ತಿಳಿಸಿದರು.

ಕೆನ್ ಬೆತ್ವಾ ನದಿ ಜೋಡಣೆ ಯೋಜನೆಯಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳ ನಡುವೆ ಕೂಡ ಇದೇ ರೀತಿ ಸಮಸ್ಯೆ ಇತ್ತು. ಆದರೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ. ಮೇಕೆದಾಟು ವಿಚಾರದಲ್ಲೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಿ ಎಂದು ಕರ್ನಾಟಕ ಮತ್ತು ತಮಿಳುನಾಡು ಸರಕಾರಗಳಿಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಲಹೆ ನೀಡಿದರು. ಇದೇ ವೇಳೆ ಮಹದಾಯಿ ವಿಚಾರದಲ್ಲೂ ಬೇರೆ ಬೇರೆ ರೀತಿಯ ಸಮಸ್ಯೆ ಇದೆ. ಅದರ ಬಗ್ಗೆ ಕೂಡ ಚರ್ಚೆ ಮಾಡುವುದಿಲ್ಲ ಎಂದರು.

ಕಾಂಗ್ರೆಸ್‌ಗೆ ನೀರಿನ ವಿಚಾರದಲ್ಲಿ ಮಾತನಾಡಲು ಯಾವುದೇ ನೈತಿಕತೆ ಇಲ್ಲ. ಕಳೆದ 55 ವರ್ಷಗಳಿಂದ ಅಧಿಕಾರದಲ್ಲಿದ್ದಾಗ ಸಮಸ್ಯೆ ಬಗೆಹರಿಸುವ ಬಗ್ಗೆ ಅವರು ಯೋಚಿಸಿಲ್ಲ. ಅವರಿಂದಾಗಿಯೇ ಈ ರೀತಿಯ ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಕೇಂದ್ರ ಸಚಿವರು ಟೀಕಿಸಿದರು.

ಈಶಾನ್ಯ ಕರ್ನಾಟಕದಲ್ಲಿ ಕುಡಿಯುವ ನೀರು ಯುರೇನಿಯಂ ಮಿಶ್ರಿತ ಆಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಆ ನೀರು ಕುಡಿಯದಂತೆ ಸೂಚಿಸಲಾಗಿದೆ. ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಶುದ್ಧೀಕರಿಸಿ ಗ್ರಾಮಸ್ಥರಿಗೆ ಪೂರೈಸುವಂತೆ ಸೂಚಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಶೇಖಾವತ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು