10:11 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೂಗು ತೂರಿದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಿಸುತ್ತೇವೆ: ಅಮೆರಿಕಾಕ್ಕೆ ರಷ್ಯಾ ಎಚ್ಚರಿಕೆ

06/03/2022, 13:24

ಮಾಸ್ಕೋ(reporterkarnataka.com): ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಸದ್ಯ ಶಮನವಾಗುವ ಲಕ್ಷಣ ಕಂಡು ಬರುತ್ತಿಲ್ಲ. ಉಕ್ರೇನ್‌ ನಡುವಿನ ತನ್ನ ವಿವಾದದಲ್ಲಿ ಪಾಶ್ಚಿಮಾತ್ಯ ದೇಶಗಳು ಮೂಗುತೂರಿಸುವುದನ್ನು ನಿಲ್ಲಿಸದಿದ್ದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಣೆಯಾಗಬಹುದು ಎಂದು ರಷ್ಯಾ ಎಚ್ಚರಿಕೆ ನೀಡಿದೆ.

ರಷ್ಯಾ ಈಗಾಗಲೇ ಉಕ್ರೇನ್ ರಾಜಧಾನಿ ಕೀವ್ ಮತ್ತು ಪ್ರಮುಖ ನಗರ ಖಾರ್ಕಿವ್​ ಸೇರಿದಂತೆ ಊಕ್ರೇನ್‌ ನ ಹಲವಾರು ನಗರಗಳನ್ನು ವಶಕ್ಕೆ ಪಡೆದಿದೆ.

ಪ್ರಬಲ ರಾಷ್ಟ್ರವಾದ ರಷ್ಯಾದ ಎದುರು ಪುಟ್ಟ ದೇಶ ಉಕ್ರೇನ್‌ ದಿಟ್ಟತನದಿಂದ ಹೋರಾಡುತ್ತಿರುವುದರ ಹಿಂದೆ ಅಮೆರಿಕ, ಇಂಗ್ರೆಂಡ್‌, ಜರ್ಮನಿ ಸೇರಿದಂತೆ ಹಲವು ಬಲಾಢ್ಯ ಪಾಶ್ಚಿಮಾತ್ಯ ದೇಶಗಳಿವೆ. ಈ ದೇಶಗಳು ಉಕ್ರೇನ್‌ ಗೆ ಶಾಸ್ತ್ರಾಸ್ತ್ರ ಪೂರೈಕೆ, ಸೈನಿಕ ನೆರವು, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಬೆಂಬಲವಾಗಿನಿಂತಿವೆ. ಜೊತೆಗೆ ರಷ್ಯಾ ವಿರುದ್ಧ ಕಠಿಣ ನಿರ್ಬಂಧಗಳನ್ನು ವಿಧಿಸುವ ಮೂಲಕ ರಷ್ಯಾವನ್ನು ಜಾಗತಿಕವಾಗಿ ಏಂಕಾಂಗಿಯಾಗಿಸುವ ಪ್ರಯತ್ನದಲ್ಲಿ ತೊಡಗಿವೆ. ಈ ಎಲ್ಲಾ ಬೆಳವಣಿಗೆಗಳಿಂದ ಕೆಂಡಾಮಂಡಲವಾಗಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಪಾಶ್ಚಿಮಾತ್ಯ ದೇಶಗಳು ಉಕ್ರೇನ್-ರಷ್ಯಾ ವಿವಾದದಲ್ಲಿ ಮಧ್ಯಪ್ರವೇಶಿಸುವುದು ನಿಲ್ಲಿಸದಿದ್ದರೆ ಯುದ್ಧ ಉಕ್ರೇನ್ ಗಡಿಯಾಚೆಗೂ ವಿಸ್ತರಿಸಬಹುದು ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು