1:14 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಯುದ್ಧಪೀಡಿತ ಉಕ್ರೇನ್‌ ನಿಂದ ಮತ್ತೆ 210 ಭಾರತೀಯರು ತಾಯ್ನಾಡಿಗೆ: ವಾಯುಪಡೆಯ ವಿಶೇಷ ವಿಮಾನ ಸಾಥ್

06/03/2022, 13:59

ರೊಮೇನಿಯಾ(reporterkarnataka.com): ಉಕ್ರೇನ್‌ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ವಾಯುಪಡೆಯ ವಿಶೇಷ ವಿಮಾನದ ಮೂಲಕ ಭಾನುವಾರ 210 ಭಾರತೀಯರನ್ನು ದೆಹಲಿಗೆ ಕರೆತರಲಾಯಿತು.

ದೆಹಲಿಯ ಹಿಂದನ್‌ ಏರ್‌ ಬೇಸ್‌ ಗೆ ವಿಮಾನ ಆಗಮಿಸಿದ್ದು, ವಿದ್ಯಾರ್ಥಿಗಳು ಸೇರಿದಂತೆ 210 ಜನರು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಾಸ್‌ ಆಗಿದ್ದಾರೆ.

ಉಕ್ರೇನ್‌ ನ ನೆರೆ ರಾಷ್ಟ್ರ ರೊಮೇನಿಯಾದಿಂದ ಹೊರಟ ವಿಮಾನ ಇಂದು ಮುಂಜಾನೆ 5 ಗಂಟೆಗೆ ದೆಹಲಿ ತಲುಪಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ.

ಶನಿವಾರ ಒಂದೇ ದಿನ ಸುಮಾರು 3 ಸಾವಿರ ಭಾರತೀಯರನ್ನು 15 ವಿಮಾನಗಳ ಮೂಲಕ ಕರೆತರಲಾಗಿದೆ. ಇದರಲ್ಲಿ 3 ವಾಯುಪಡೆ ವಿಮಾನಗಳನ್ನು ನಿಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು