1:40 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ರಾಮನಗರ ಎಸ್ ಪಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗರಂ: ಬಡವರಿಗೆ ಹೆಚ್ಚು ದಂಡ ವಿಧಿಸಿದರೆ ಧರಣಿಯ ಎಚ್ಚರಿಕೆ

07/03/2022, 21:14

ರಾಮನಗರ(reporterkarnataka.com): ಪೊಲೀಸರಿಗೆ 500 ರೂಪಾಯಿ ವ್ಯಾಲ್ಯೂ ಗೊತ್ತಿರುವುದಿಲ್ಲ. ಆದರೆ ರೈತನಿಗೆ ಪ್ರತಿ ರೂಪಾಯಿಯೂ ಮುಖ್ಯವಾಗಿರುತ್ತೆ. ಇದೇ ರೀತಿ ದಂಡ ವಿಧಿಸುತ್ತಿದ್ದರೆ ಪ್ರತಿಭಟನೆ ಮಾಡುತ್ತೇನೆ. ಎಸ್‌ಪಿ ಕಚೇರಿ ಮುಂದೆ ಧರಣಿ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. 


ಅವನು ಇಲ್ಲಿಗೆ ಏಕೆ ಬಂದಿದ್ದಾನೆಂದು ನನಗೆ ಗೊತ್ತಿದೆ ಎಂದು ರಾಮನಗರ ಎಸ್.ಪಿ ಸಂತೋಷ್ ಬಾಬು ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಇಲ್ಲಿ ಪೊಲೀಸರು ದಂಡ ವಿಧಿಸುವುದು ಹೆಚ್ಚಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರಿಂದ ಕುಮಾರಸ್ವಾಮಿಗೆ ದೂರು ನೀಡಲಾಗಿದೆ. ಈ ವೇಳೆ ಪೊಲೀಸರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೀಗೆ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರ ಪೊಲೀಸರಿಗೆ ಸಂಬಳ ನೀಡುವುದಿಲ್ಲವಾ? ನಾನು ರಾಮನಗರ ಎಸ್‌ಪಿ ಜತೆ ಮಾತನಾಡುವುದಿಲ್ಲ. ನೀವು ಹೋಗಿ ಎಸ್‌ಪಿಯನ್ನು ಕೇಳಿ ಎಂದು ಹೆಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಚನ್ನಪಟ್ಟಣ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಇಂಜಿನಿಯರ್ ಕರೆದೊಯ್ದು MLCಯಿಂದ ಕೆರೆ ವೀಕ್ಷಣೆ ಮಾಡಲಾಗಿದೆ. ಕೆಲಸ ಮಾಡಿಸ್ತಿರುವುದು ನಾನು, ಸ್ಕೋಪ್ ಬೇರೆಯವರದ್ದು. ಸಿ.ಪಿ. ಯೋಗೇಶ್ವರ್ ಸ್ಕೋಪ್ ತೆಗೆದುಕೊಳ್ಳಲು ಬಂದಿದ್ದಾರೆ ಎಂದು ಇದಕ್ಕೂ ಮೊದಲು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಮಾತನಾಡಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಪಾದಯಾತ್ರೆ ಹಣೆಬರಹ ಎಲ್ಲಿಗೆ ಬಂದಿದೆ. 10 ದಿನ ಭೂರಿ ಭೋಜನ ತಿಂದಿದ್ದೇ ಸಿಕ್ಕಿದ್ದು ಇವರಿಗೆ. ಬಜೆಟ್‌ನಲ್ಲಿ 1,000 ಕೋಟಿ ಪಡೆದು ಏನು ಮಾಡ್ತೀರಾ. ಸಾವಿರ ಕೋಟಿಯಲ್ಲಿ ಕೆಲಸ ಮಾಡಲು ಸಾಧ್ಯವೇ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು