7:28 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ರಾಮನಗರ ಎಸ್ ಪಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗರಂ: ಬಡವರಿಗೆ ಹೆಚ್ಚು ದಂಡ ವಿಧಿಸಿದರೆ ಧರಣಿಯ ಎಚ್ಚರಿಕೆ

07/03/2022, 21:14

ರಾಮನಗರ(reporterkarnataka.com): ಪೊಲೀಸರಿಗೆ 500 ರೂಪಾಯಿ ವ್ಯಾಲ್ಯೂ ಗೊತ್ತಿರುವುದಿಲ್ಲ. ಆದರೆ ರೈತನಿಗೆ ಪ್ರತಿ ರೂಪಾಯಿಯೂ ಮುಖ್ಯವಾಗಿರುತ್ತೆ. ಇದೇ ರೀತಿ ದಂಡ ವಿಧಿಸುತ್ತಿದ್ದರೆ ಪ್ರತಿಭಟನೆ ಮಾಡುತ್ತೇನೆ. ಎಸ್‌ಪಿ ಕಚೇರಿ ಮುಂದೆ ಧರಣಿ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. 


ಅವನು ಇಲ್ಲಿಗೆ ಏಕೆ ಬಂದಿದ್ದಾನೆಂದು ನನಗೆ ಗೊತ್ತಿದೆ ಎಂದು ರಾಮನಗರ ಎಸ್.ಪಿ ಸಂತೋಷ್ ಬಾಬು ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಇಲ್ಲಿ ಪೊಲೀಸರು ದಂಡ ವಿಧಿಸುವುದು ಹೆಚ್ಚಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರಿಂದ ಕುಮಾರಸ್ವಾಮಿಗೆ ದೂರು ನೀಡಲಾಗಿದೆ. ಈ ವೇಳೆ ಪೊಲೀಸರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೀಗೆ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರ ಪೊಲೀಸರಿಗೆ ಸಂಬಳ ನೀಡುವುದಿಲ್ಲವಾ? ನಾನು ರಾಮನಗರ ಎಸ್‌ಪಿ ಜತೆ ಮಾತನಾಡುವುದಿಲ್ಲ. ನೀವು ಹೋಗಿ ಎಸ್‌ಪಿಯನ್ನು ಕೇಳಿ ಎಂದು ಹೆಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಚನ್ನಪಟ್ಟಣ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಇಂಜಿನಿಯರ್ ಕರೆದೊಯ್ದು MLCಯಿಂದ ಕೆರೆ ವೀಕ್ಷಣೆ ಮಾಡಲಾಗಿದೆ. ಕೆಲಸ ಮಾಡಿಸ್ತಿರುವುದು ನಾನು, ಸ್ಕೋಪ್ ಬೇರೆಯವರದ್ದು. ಸಿ.ಪಿ. ಯೋಗೇಶ್ವರ್ ಸ್ಕೋಪ್ ತೆಗೆದುಕೊಳ್ಳಲು ಬಂದಿದ್ದಾರೆ ಎಂದು ಇದಕ್ಕೂ ಮೊದಲು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಮಾತನಾಡಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಪಾದಯಾತ್ರೆ ಹಣೆಬರಹ ಎಲ್ಲಿಗೆ ಬಂದಿದೆ. 10 ದಿನ ಭೂರಿ ಭೋಜನ ತಿಂದಿದ್ದೇ ಸಿಕ್ಕಿದ್ದು ಇವರಿಗೆ. ಬಜೆಟ್‌ನಲ್ಲಿ 1,000 ಕೋಟಿ ಪಡೆದು ಏನು ಮಾಡ್ತೀರಾ. ಸಾವಿರ ಕೋಟಿಯಲ್ಲಿ ಕೆಲಸ ಮಾಡಲು ಸಾಧ್ಯವೇ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು