1:37 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಉಕ್ರೇನ್‌ನಿಂದ ವಾಪಸ್ಸಾದ ಕೋಲಾರದ ಮೋನಿಷಾ ಪ್ರಿಯಾ: ಕೇಂದ್ರ ಸರಕಾರ, ರಾಯಭಾರ ಕಚೇರಿ ಸಿಬ್ಬಂದಿಗೆ ಧನ್ಯವಾದ 

07/03/2022, 21:55

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಎಪಿಎಂಸಿ ನೌಕರ ಮುನಿರಾಜು ಅವರ ಸಹೋದರ ರಾಜ್ ಕುಮಾರ್ , ಸುಕನ್ಯಾ ದಂಪತಿ ಪುತ್ರಿ ಮೋನಿಷಾಪ್ರಿಯ ಕಳೆದ ರಾತ್ರಿ ಯುದ್ಧಪೀಡಿತ ಉಕ್ರೇನ್‌ನಿಂದ ವಾಪಸ್ಸಾಗಿದ್ದು , ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ನೀಡಿದ ನೆರವಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು , ಬಂಕರ್‌ಗಳು , ಮೆಟ್ರೋ ನಿಲ್ದಾಣಗಳಲ್ಲಿ ನಾವು ತಂಗಿದ್ದೆವು , ಅತ್ಯಂತ ಕಷ್ಟದ ದಿನಗಳನ್ನು ನೋಡಬೇಕಾಯಿತು. ನಾವಿದ್ದ ಹಾಸ್ಟೆಲ್‌ಗೂ ಭಾರತದ ಧ್ವಜ ಕಟ್ಟಿದ್ದು , ಧ್ವಜ ಹಿಡಿದೇ ಗಡಿ ತಲುಪಿದ್ದು ನಮಗೆ ನೆರವಾಯಿತು ಎಂದರು . ಉಕ್ರೇನ್‌ನೊಳಗೆ ನಮ್ಮ ಭಾರತದ ವಿಮಾನಗಳು ಬರುವ ಹಾಗಿರಲಿಲ್ಲ. ಯುದ್ಧ ಭೀತಿ ಹಾಗೂ ವಿಮಾನ ನಿಲ್ದಾಣಗಳು ಧ್ವಂಸಗೊಂಡಿದ್ದವು.

ಕಷ್ಟಪಟ್ಟು ಗಡಿ ತಲುಪುವಂತೆ ನಮ್ಮ ರಾಯಭಾರ ಕಚೇರಿ ನಿರ್ದೇಶನ ನೀಡಿತ್ತು . ರೈಲುಗಳಲ್ಲಿ ಬರುವಾಗಲೂ ಅಲ್ಲಲ್ಲಿ ಬಾಂಬ್ ಸದ್ದು ಕೇಳಿಸುತ್ತಿದ್ದರಿಂದ ಪ್ರಾರ್ಥನೆ ಮಾಡಿಕೊಂಡು ಬಂದು ಗಡಿ ತಲುಪಿದೆವು ಎಂದರು .

ಗಡಿಯಿಂದ ನಮ್ಮ ಭಾರತೀಯ ರಾಯಭಾರ ಸಿಬ್ಬಂದಿ ನಮ್ಮನ್ನು ಅತ್ಯಂತ ಉತ್ತಮ ರೀತಿಯಲ್ಲಿ ನೋಡಿಕೊಂಡರು ನಾವಿಂದು ಬದುಕಿ ಬಂದಿದ್ದೇವೆ ಎಂಬುದೇ ಅತಿಹೆಚ್ಚ ಸಂತಸ , ಭಾರತ ಸರ್ಕಾರ , ರಾಜಭಾರ ಕಚೇರಿಗೆ ನಾವು ಋಣಿಯಾಗಿದ್ದೇವೆ ಎಂದು ತಿಳಿಸಿದರು . 

ಕೋಲಾರದ ಎಪಿಎಂಸಿ ನೌಕರ ಮುನಿರಾಜು ಅವರ ಸಹೋದರ ರಾಜ್‌ಕುಮಾರ್‌ , ಸುಕನ್ಯಾ ದಂಪತಿ ಪುತ್ರಿ ಮೋನಿಷಾಪ್ರಿಯ ಕಳೆದ ರಾತ್ರಿ ಯುದ್ಧಪೀಡಿತ ಉಕ್ರೇನ್‌ನಿಂದ ವಾಪಸ್ಸಾಗಿದ್ದು , ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ನೀಡಿದ ನೆರವಿಗೆ ಧನ್ಯವಾದ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು