7:11 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಉಕ್ರೇನ್‌ನಿಂದ ವಾಪಸ್ಸಾದ ಕೋಲಾರದ ಮೋನಿಷಾ ಪ್ರಿಯಾ: ಕೇಂದ್ರ ಸರಕಾರ, ರಾಯಭಾರ ಕಚೇರಿ ಸಿಬ್ಬಂದಿಗೆ ಧನ್ಯವಾದ 

07/03/2022, 21:55

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಎಪಿಎಂಸಿ ನೌಕರ ಮುನಿರಾಜು ಅವರ ಸಹೋದರ ರಾಜ್ ಕುಮಾರ್ , ಸುಕನ್ಯಾ ದಂಪತಿ ಪುತ್ರಿ ಮೋನಿಷಾಪ್ರಿಯ ಕಳೆದ ರಾತ್ರಿ ಯುದ್ಧಪೀಡಿತ ಉಕ್ರೇನ್‌ನಿಂದ ವಾಪಸ್ಸಾಗಿದ್ದು , ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ನೀಡಿದ ನೆರವಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು , ಬಂಕರ್‌ಗಳು , ಮೆಟ್ರೋ ನಿಲ್ದಾಣಗಳಲ್ಲಿ ನಾವು ತಂಗಿದ್ದೆವು , ಅತ್ಯಂತ ಕಷ್ಟದ ದಿನಗಳನ್ನು ನೋಡಬೇಕಾಯಿತು. ನಾವಿದ್ದ ಹಾಸ್ಟೆಲ್‌ಗೂ ಭಾರತದ ಧ್ವಜ ಕಟ್ಟಿದ್ದು , ಧ್ವಜ ಹಿಡಿದೇ ಗಡಿ ತಲುಪಿದ್ದು ನಮಗೆ ನೆರವಾಯಿತು ಎಂದರು . ಉಕ್ರೇನ್‌ನೊಳಗೆ ನಮ್ಮ ಭಾರತದ ವಿಮಾನಗಳು ಬರುವ ಹಾಗಿರಲಿಲ್ಲ. ಯುದ್ಧ ಭೀತಿ ಹಾಗೂ ವಿಮಾನ ನಿಲ್ದಾಣಗಳು ಧ್ವಂಸಗೊಂಡಿದ್ದವು.

ಕಷ್ಟಪಟ್ಟು ಗಡಿ ತಲುಪುವಂತೆ ನಮ್ಮ ರಾಯಭಾರ ಕಚೇರಿ ನಿರ್ದೇಶನ ನೀಡಿತ್ತು . ರೈಲುಗಳಲ್ಲಿ ಬರುವಾಗಲೂ ಅಲ್ಲಲ್ಲಿ ಬಾಂಬ್ ಸದ್ದು ಕೇಳಿಸುತ್ತಿದ್ದರಿಂದ ಪ್ರಾರ್ಥನೆ ಮಾಡಿಕೊಂಡು ಬಂದು ಗಡಿ ತಲುಪಿದೆವು ಎಂದರು .

ಗಡಿಯಿಂದ ನಮ್ಮ ಭಾರತೀಯ ರಾಯಭಾರ ಸಿಬ್ಬಂದಿ ನಮ್ಮನ್ನು ಅತ್ಯಂತ ಉತ್ತಮ ರೀತಿಯಲ್ಲಿ ನೋಡಿಕೊಂಡರು ನಾವಿಂದು ಬದುಕಿ ಬಂದಿದ್ದೇವೆ ಎಂಬುದೇ ಅತಿಹೆಚ್ಚ ಸಂತಸ , ಭಾರತ ಸರ್ಕಾರ , ರಾಜಭಾರ ಕಚೇರಿಗೆ ನಾವು ಋಣಿಯಾಗಿದ್ದೇವೆ ಎಂದು ತಿಳಿಸಿದರು . 

ಕೋಲಾರದ ಎಪಿಎಂಸಿ ನೌಕರ ಮುನಿರಾಜು ಅವರ ಸಹೋದರ ರಾಜ್‌ಕುಮಾರ್‌ , ಸುಕನ್ಯಾ ದಂಪತಿ ಪುತ್ರಿ ಮೋನಿಷಾಪ್ರಿಯ ಕಳೆದ ರಾತ್ರಿ ಯುದ್ಧಪೀಡಿತ ಉಕ್ರೇನ್‌ನಿಂದ ವಾಪಸ್ಸಾಗಿದ್ದು , ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ನೀಡಿದ ನೆರವಿಗೆ ಧನ್ಯವಾದ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು