8:10 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉಕ್ರೇನ್‌ನಿಂದ ವಾಪಸ್ಸಾದ ಕೋಲಾರದ ಮೋನಿಷಾ ಪ್ರಿಯಾ: ಕೇಂದ್ರ ಸರಕಾರ, ರಾಯಭಾರ ಕಚೇರಿ ಸಿಬ್ಬಂದಿಗೆ ಧನ್ಯವಾದ 

07/03/2022, 21:55

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಎಪಿಎಂಸಿ ನೌಕರ ಮುನಿರಾಜು ಅವರ ಸಹೋದರ ರಾಜ್ ಕುಮಾರ್ , ಸುಕನ್ಯಾ ದಂಪತಿ ಪುತ್ರಿ ಮೋನಿಷಾಪ್ರಿಯ ಕಳೆದ ರಾತ್ರಿ ಯುದ್ಧಪೀಡಿತ ಉಕ್ರೇನ್‌ನಿಂದ ವಾಪಸ್ಸಾಗಿದ್ದು , ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ನೀಡಿದ ನೆರವಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು , ಬಂಕರ್‌ಗಳು , ಮೆಟ್ರೋ ನಿಲ್ದಾಣಗಳಲ್ಲಿ ನಾವು ತಂಗಿದ್ದೆವು , ಅತ್ಯಂತ ಕಷ್ಟದ ದಿನಗಳನ್ನು ನೋಡಬೇಕಾಯಿತು. ನಾವಿದ್ದ ಹಾಸ್ಟೆಲ್‌ಗೂ ಭಾರತದ ಧ್ವಜ ಕಟ್ಟಿದ್ದು , ಧ್ವಜ ಹಿಡಿದೇ ಗಡಿ ತಲುಪಿದ್ದು ನಮಗೆ ನೆರವಾಯಿತು ಎಂದರು . ಉಕ್ರೇನ್‌ನೊಳಗೆ ನಮ್ಮ ಭಾರತದ ವಿಮಾನಗಳು ಬರುವ ಹಾಗಿರಲಿಲ್ಲ. ಯುದ್ಧ ಭೀತಿ ಹಾಗೂ ವಿಮಾನ ನಿಲ್ದಾಣಗಳು ಧ್ವಂಸಗೊಂಡಿದ್ದವು.

ಕಷ್ಟಪಟ್ಟು ಗಡಿ ತಲುಪುವಂತೆ ನಮ್ಮ ರಾಯಭಾರ ಕಚೇರಿ ನಿರ್ದೇಶನ ನೀಡಿತ್ತು . ರೈಲುಗಳಲ್ಲಿ ಬರುವಾಗಲೂ ಅಲ್ಲಲ್ಲಿ ಬಾಂಬ್ ಸದ್ದು ಕೇಳಿಸುತ್ತಿದ್ದರಿಂದ ಪ್ರಾರ್ಥನೆ ಮಾಡಿಕೊಂಡು ಬಂದು ಗಡಿ ತಲುಪಿದೆವು ಎಂದರು .

ಗಡಿಯಿಂದ ನಮ್ಮ ಭಾರತೀಯ ರಾಯಭಾರ ಸಿಬ್ಬಂದಿ ನಮ್ಮನ್ನು ಅತ್ಯಂತ ಉತ್ತಮ ರೀತಿಯಲ್ಲಿ ನೋಡಿಕೊಂಡರು ನಾವಿಂದು ಬದುಕಿ ಬಂದಿದ್ದೇವೆ ಎಂಬುದೇ ಅತಿಹೆಚ್ಚ ಸಂತಸ , ಭಾರತ ಸರ್ಕಾರ , ರಾಜಭಾರ ಕಚೇರಿಗೆ ನಾವು ಋಣಿಯಾಗಿದ್ದೇವೆ ಎಂದು ತಿಳಿಸಿದರು . 

ಕೋಲಾರದ ಎಪಿಎಂಸಿ ನೌಕರ ಮುನಿರಾಜು ಅವರ ಸಹೋದರ ರಾಜ್‌ಕುಮಾರ್‌ , ಸುಕನ್ಯಾ ದಂಪತಿ ಪುತ್ರಿ ಮೋನಿಷಾಪ್ರಿಯ ಕಳೆದ ರಾತ್ರಿ ಯುದ್ಧಪೀಡಿತ ಉಕ್ರೇನ್‌ನಿಂದ ವಾಪಸ್ಸಾಗಿದ್ದು , ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ನೀಡಿದ ನೆರವಿಗೆ ಧನ್ಯವಾದ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು