8:25 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಉಕ್ರೇನ್‌ನಿಂದ ವಾಪಸ್ಸಾದ ಕೋಲಾರದ ಮೋನಿಷಾ ಪ್ರಿಯಾ: ಕೇಂದ್ರ ಸರಕಾರ, ರಾಯಭಾರ ಕಚೇರಿ ಸಿಬ್ಬಂದಿಗೆ ಧನ್ಯವಾದ 

07/03/2022, 21:55

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಎಪಿಎಂಸಿ ನೌಕರ ಮುನಿರಾಜು ಅವರ ಸಹೋದರ ರಾಜ್ ಕುಮಾರ್ , ಸುಕನ್ಯಾ ದಂಪತಿ ಪುತ್ರಿ ಮೋನಿಷಾಪ್ರಿಯ ಕಳೆದ ರಾತ್ರಿ ಯುದ್ಧಪೀಡಿತ ಉಕ್ರೇನ್‌ನಿಂದ ವಾಪಸ್ಸಾಗಿದ್ದು , ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ನೀಡಿದ ನೆರವಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು , ಬಂಕರ್‌ಗಳು , ಮೆಟ್ರೋ ನಿಲ್ದಾಣಗಳಲ್ಲಿ ನಾವು ತಂಗಿದ್ದೆವು , ಅತ್ಯಂತ ಕಷ್ಟದ ದಿನಗಳನ್ನು ನೋಡಬೇಕಾಯಿತು. ನಾವಿದ್ದ ಹಾಸ್ಟೆಲ್‌ಗೂ ಭಾರತದ ಧ್ವಜ ಕಟ್ಟಿದ್ದು , ಧ್ವಜ ಹಿಡಿದೇ ಗಡಿ ತಲುಪಿದ್ದು ನಮಗೆ ನೆರವಾಯಿತು ಎಂದರು . ಉಕ್ರೇನ್‌ನೊಳಗೆ ನಮ್ಮ ಭಾರತದ ವಿಮಾನಗಳು ಬರುವ ಹಾಗಿರಲಿಲ್ಲ. ಯುದ್ಧ ಭೀತಿ ಹಾಗೂ ವಿಮಾನ ನಿಲ್ದಾಣಗಳು ಧ್ವಂಸಗೊಂಡಿದ್ದವು.

ಕಷ್ಟಪಟ್ಟು ಗಡಿ ತಲುಪುವಂತೆ ನಮ್ಮ ರಾಯಭಾರ ಕಚೇರಿ ನಿರ್ದೇಶನ ನೀಡಿತ್ತು . ರೈಲುಗಳಲ್ಲಿ ಬರುವಾಗಲೂ ಅಲ್ಲಲ್ಲಿ ಬಾಂಬ್ ಸದ್ದು ಕೇಳಿಸುತ್ತಿದ್ದರಿಂದ ಪ್ರಾರ್ಥನೆ ಮಾಡಿಕೊಂಡು ಬಂದು ಗಡಿ ತಲುಪಿದೆವು ಎಂದರು .

ಗಡಿಯಿಂದ ನಮ್ಮ ಭಾರತೀಯ ರಾಯಭಾರ ಸಿಬ್ಬಂದಿ ನಮ್ಮನ್ನು ಅತ್ಯಂತ ಉತ್ತಮ ರೀತಿಯಲ್ಲಿ ನೋಡಿಕೊಂಡರು ನಾವಿಂದು ಬದುಕಿ ಬಂದಿದ್ದೇವೆ ಎಂಬುದೇ ಅತಿಹೆಚ್ಚ ಸಂತಸ , ಭಾರತ ಸರ್ಕಾರ , ರಾಜಭಾರ ಕಚೇರಿಗೆ ನಾವು ಋಣಿಯಾಗಿದ್ದೇವೆ ಎಂದು ತಿಳಿಸಿದರು . 

ಕೋಲಾರದ ಎಪಿಎಂಸಿ ನೌಕರ ಮುನಿರಾಜು ಅವರ ಸಹೋದರ ರಾಜ್‌ಕುಮಾರ್‌ , ಸುಕನ್ಯಾ ದಂಪತಿ ಪುತ್ರಿ ಮೋನಿಷಾಪ್ರಿಯ ಕಳೆದ ರಾತ್ರಿ ಯುದ್ಧಪೀಡಿತ ಉಕ್ರೇನ್‌ನಿಂದ ವಾಪಸ್ಸಾಗಿದ್ದು , ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ನೀಡಿದ ನೆರವಿಗೆ ಧನ್ಯವಾದ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು