9:42 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ಬಡವರಿಗೆ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳು ಸತಾಯಿಸುತ್ತಿವೆ; ಸೂಟು-ಬೂಟಿಗೆ ಕೈಬೀಸಿ ಕೊಡುತ್ತಿವೆ!!

07/03/2022, 22:24

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರಮಿಕರಿಗೆ ಸಾಲ ಕೊಡಲು ರಾಷ್ಟ್ರೀಕೃತ ಬ್ಯಾಂಕ್‌ಗಳು ಹತ್ತಾರು ದಾಖಲೆ ಕೇಳಿ ವರ್ಷಾನುಗಟ್ಟಲೇ ಸತಾಯಿಸುತ್ತವೆ. ಸೂಟು ಬೂಟು ಹಾಕಿಕೊಂಡು ಇಂಗ್ಲಿಷ್‌ನಲ್ಲಿ ಮಾತನಾಡಿದದರೆ ಅವನ ಕೈಕುಲಕಿ ನೂರಾರು ಸಾವಿರ ಕೋಟಿ ರೂ ನೀಡುತ್ತವೆ .10-20 ಸಾವಿರ ರೂ  ಸಾಲ ಪಡೆದವರ ಮನೆ ಹರಾಜು ಹಾಕುವ ದೇಶದ ಪರಿಸ್ಥಿತಿ ಬದಲಾಯಿಸ ಬೇಕಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು .

ಪಟ್ಟಣದ ರಾಜಧಾನಿ ಮಂಡಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಶ್ರೀನಿವಾಸಪುರ ಶಾಖೆ , ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಿಂದ 102 ಮಹಿಳಾ ಸಂಘಗಳಿಗೆ 5.2 ಕೋಟಿ ರೂ ಸಾಲ ವಿತರಿಸಿ ಮಾತನಾಡಿ , ಸತತ 8 ವರ್ಷಗಳಿಂದ ಡಿಸಿಸಿ ಬ್ಯಾಂಕ್ ಮೂಲಕ ಸಾಲ ನೀಡಲಾಗುತ್ತಿದೆ . 

ಹಿಂದೆ 35 ಸಾವಿರ ರೂ ಇದ್ದ ಸಾಲವನ್ನು ನಂತರ 50 ಸಾವಿರ ರೂ.ಗೆ ಏರಿಸಿ ಶೂನ್ಯ ಬಡ್ಡಿಯಲ್ಲಿ ಕೊಡಲಾಗುತ್ತದೆ. ಸಾಲ ಕೊಡುವಾಗ ನಿಮ್ಮನ್ನು ಬ್ಯಾಂಕ್ ಗೌರದಿಂದ ಕಾಣುತ್ತದೆ. ಹಾಗಾಗಿ ಪಡೆದ ಸಾಲ ಸಕಾಲಕ್ಕೆ ಪಾವತಿ ಮಾಡಿದಲ್ಲಿ ಇತರರಿಗೆ ಸಾಲ ಕೊಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಎಂ ಎಲ್‌ ಸಿ ಎಂ.ಎಲ್.ಅನಿಲ್ ಕುಮಾರ್ , ಕಸಬಾ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಆಲಂಬಗಿರಿ ಅಯ್ಯಪ್ಪ , ಉಪಾಧ್ಯಕ್ಷೆ ಶಾಂತಮ್ಮ ,ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿರ್ದೇಶಕರಾದ ಶಬೀರ್ ಅಹ್ಮದ್ ,ದ್ವಾರಸಂದ್ರ , ನಾರಾಯಣಸ್ವಾಮಿ , ಮುನಿ ವೆಂಕಟಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಿ.ವಿ. ವೆಂಕಟರೆಡ್ಡಿ , ಎಸ್.ವಿ.ಸುಧಾಕರ್‌ , ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಧ್ಯಕ್ಷ ದಿಂಬಾಲ್ – ಅಶೋಕ್ ,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಕ್ಚರ್  ಅಕ್ಬರ್ ಷರೀಫ್ ,  ಪುರಸಭೆ ಸದಸ್ಯರಾದ ಕೆ. ಅನೀಸ್ ಅಹಮದ್ , ಇಪ್ತಿಕಾರ್ ಅಹ್ಮದ್ , ಕೊಂಡಸಂದ್ರ ಶಿವಾರೆಡ್ಡಿ , ಲಕ್ಷ್ಮಣರೆಡ್ಡಿ ಇತರರು  ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು