3:36 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿಗೆ ಥ್ಯಾಂಕ್ಸ್: ಹೂಗುಚ್ಛ ನೀಡಿ ಸತ್ಕರಿಸಿದ ಡಿಸಿ

07/03/2022, 22:36

ಮಂಗಳೂರು(reporterkarnataka.com):  ಉಕ್ರೇನ್ ನಿಂದ ಆಗಮಿಸಿದ ಮಂಗಳೂರು ತಾಲೂಕಿನ ಅನನ್ಯಾ ಅನ್ನಾ, ಕ್ಲಾಟಸ್ ಒಸ್ಮಂಡ್ ಡಿಸೋಜಾ, ಅಹಮದ್ ಸಾದ್ ಅರ್ಷಾದ್, ಲಕ್ಷಣ ಪುರುಷೊತ್ತಮ ಹಾಗೂ ಮೂಡುಬಿದ್ರೆ ತಾಲೂಕಿನ ಶಲ್ವಿನ್ ಪ್ರೀತಿ ಅರ್ನಾ ಐವರು ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದರು.

ಇದೇ ಸಂದರ್ಭದಲ್ಲಿ ತಮ್ಮ ಅನುಭವಗಳನ್ನು ಜಿಲ್ಲಾಧಿಕಾರಿಯವರೊಂದಿಗೆ ಹಂಚಿಕೊಂಡರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡು ಅವರಿಗೆ ಹೂಗುಚ್ಛ ಹಾಗೂ ಪುಸ್ತಕ ನೀಡಿ ಸ್ವಾಗತಿಸಿದರು.

ವಿದ್ಯಾರ್ಥಿಗಳು ಮನೆಗೆ ಹೋಗದೇ ವಿಮಾನ ನಿಲ್ದಾಣದಿಂದ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದು, ಜಿಲ್ಲಾಧಿಕಾರಿಯವರೊಂದಿಗೆ ಕೇಕ್ ಕತ್ತರಿಸಿದ್ದು, ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು ಕೂಡ ಇದ್ದರು. ಮಂಗಳೂರಿಗೆ ಈ ವಿದ್ಯಾರ್ಥಿಗಳನ್ನು ಕರೆತರುವಲ್ಲಿ ಜಿಲ್ಲಾಧಿಕಾರಿಯವರು ವಹಿಸಿದ ಮಹತ್ತರ ಪಾತ್ರದ ಬಗ್ಗೆ ವಿದ್ಯಾರ್ಥಿಗಳು ಸ್ಮರಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು