8:10 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಾಳಿ-  ಮಾಲಗಾರ ಸಮಾಜದ ಅಭಿವೃದ್ಧಿಗೆ ಅನುದಾನ ಘೋಷಣೆ: ಸಿಎಂಗೆ ಮುರಿಗೆಪ್ಪ ಮಾಲಗಾರ ಅಭಿನಂದನೆ

09/03/2022, 09:11

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಳಿ-  ಮಾಲಗಾರ ಸಮಾಜ ಸೇರಿ 9 ಹಿಂದುಳಿದ ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ ಬಡವರ ಬಂದು   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಾಗೂ ಮಾಲಗಾರ ಸಮಾಜದ ಬೇಡಿಕೆ ಈಡೇರಿಸಲಿಕ್ಕೆ ಮೊದಲು ಸಹಕರಿಸಿದ   ಕೆ ಎಮ್ ಅಧ್ಯಕ್ಷ ಹಾಗೂ ಅರಬಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಾಳಿ / ಮಾಲಗಾರ ಸಮಾಜ ಹಾಗೂ ಹಳ್ಳೂರ ಗ್ರಾಮದ  ಯುವ ಮುಖಂಡ ಸಮಾಜ ಸೇವಕ ಮುರಿಗೆಪ್ಪ ಮಾಲಗಾರ ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ. 

ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ 2022-23ನೇ  ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿರುವ  25ರಿಂದ 30 ಲಕ್ಷ ಜನಸಂಖ್ಯೆ ಹೊಂದಿರುವ ರಾಜಕೀಯ, ಸಾಮಾಜಿಕವಾಗಿ ಹಿಂದುಳಿದ  ಮಾಲಗಾರ -ಮಾಳಿ ಸಮಾಜದ ಬಹುದಿನಗಳ ಬೇಡಿಕೆಯಾದ ನೀಲೂರು ನಿಂಬೆಕ್ಕಾದೇವಿ ಜನ್ಮ ಸ್ಥಳ ಅಭಿವೃದ್ಧಿ ಪಡಿಸುವುದು, ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆಯವರ ಹೆಸರಿನಲ್ಲಿ ವಾರ್ಷಿಕ ರಾಜ್ಯ ಪ್ರಶಸ್ತಿ ನೀಡುವುದು ಹಾಗೂ ಮಾಳಿ-  ಮಾಲಗಾರ ಸಮಾಜ ಸೇರಿ 9 ಹಿಂದುಳಿದ  ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯವರಿಗೆ ಮೊದಲು ಬೇಡಿಕೆ ಈಡೇರಿಸಲು ಪತ್ರ ಕಳುಹಿಸಿದ ಕುಡಚಿ ಶಾಸಕ ಪಿ ರಾಜೀವ ಸೇರಿದಂತೆ ಸಮಾಜದ  ಬೇಡಿಕೆ ಈಡೇರಿಸಲಿಕ್ಕೆ ಸರಕಾರಕ್ಕೆ ಸಲಹೆ ನೀಡಿದ ಶಾಸಕರು, ಸಚಿವರು, ವಿಧಾನ ಪರಿಷತ್ ಸದಸ್ಯರು, ಸಮಾಜದ ಮುಖಂಡರಿಗೆ ಮಾಳಿ / ಮಾಲಗಾರ ಸಮಾಜ ಹಾಗೂ ಹಳ್ಳೂರ ಗ್ರಾಮದ  ಯುವ ಮುಖಂಡ ಸಮಾಜ ಸೇವಕ ಮುರಿಗೆಪ್ಪ ಮಾಲಗಾರ ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು