10:51 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಮಾಳಿ-  ಮಾಲಗಾರ ಸಮಾಜದ ಅಭಿವೃದ್ಧಿಗೆ ಅನುದಾನ ಘೋಷಣೆ: ಸಿಎಂಗೆ ಮುರಿಗೆಪ್ಪ ಮಾಲಗಾರ ಅಭಿನಂದನೆ

09/03/2022, 09:11

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಳಿ-  ಮಾಲಗಾರ ಸಮಾಜ ಸೇರಿ 9 ಹಿಂದುಳಿದ ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ ಬಡವರ ಬಂದು   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಾಗೂ ಮಾಲಗಾರ ಸಮಾಜದ ಬೇಡಿಕೆ ಈಡೇರಿಸಲಿಕ್ಕೆ ಮೊದಲು ಸಹಕರಿಸಿದ   ಕೆ ಎಮ್ ಅಧ್ಯಕ್ಷ ಹಾಗೂ ಅರಬಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಾಳಿ / ಮಾಲಗಾರ ಸಮಾಜ ಹಾಗೂ ಹಳ್ಳೂರ ಗ್ರಾಮದ  ಯುವ ಮುಖಂಡ ಸಮಾಜ ಸೇವಕ ಮುರಿಗೆಪ್ಪ ಮಾಲಗಾರ ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ. 

ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ 2022-23ನೇ  ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿರುವ  25ರಿಂದ 30 ಲಕ್ಷ ಜನಸಂಖ್ಯೆ ಹೊಂದಿರುವ ರಾಜಕೀಯ, ಸಾಮಾಜಿಕವಾಗಿ ಹಿಂದುಳಿದ  ಮಾಲಗಾರ -ಮಾಳಿ ಸಮಾಜದ ಬಹುದಿನಗಳ ಬೇಡಿಕೆಯಾದ ನೀಲೂರು ನಿಂಬೆಕ್ಕಾದೇವಿ ಜನ್ಮ ಸ್ಥಳ ಅಭಿವೃದ್ಧಿ ಪಡಿಸುವುದು, ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆಯವರ ಹೆಸರಿನಲ್ಲಿ ವಾರ್ಷಿಕ ರಾಜ್ಯ ಪ್ರಶಸ್ತಿ ನೀಡುವುದು ಹಾಗೂ ಮಾಳಿ-  ಮಾಲಗಾರ ಸಮಾಜ ಸೇರಿ 9 ಹಿಂದುಳಿದ  ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯವರಿಗೆ ಮೊದಲು ಬೇಡಿಕೆ ಈಡೇರಿಸಲು ಪತ್ರ ಕಳುಹಿಸಿದ ಕುಡಚಿ ಶಾಸಕ ಪಿ ರಾಜೀವ ಸೇರಿದಂತೆ ಸಮಾಜದ  ಬೇಡಿಕೆ ಈಡೇರಿಸಲಿಕ್ಕೆ ಸರಕಾರಕ್ಕೆ ಸಲಹೆ ನೀಡಿದ ಶಾಸಕರು, ಸಚಿವರು, ವಿಧಾನ ಪರಿಷತ್ ಸದಸ್ಯರು, ಸಮಾಜದ ಮುಖಂಡರಿಗೆ ಮಾಳಿ / ಮಾಲಗಾರ ಸಮಾಜ ಹಾಗೂ ಹಳ್ಳೂರ ಗ್ರಾಮದ  ಯುವ ಮುಖಂಡ ಸಮಾಜ ಸೇವಕ ಮುರಿಗೆಪ್ಪ ಮಾಲಗಾರ ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು