3:36 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಮಾಳಿ-  ಮಾಲಗಾರ ಸಮಾಜದ ಅಭಿವೃದ್ಧಿಗೆ ಅನುದಾನ ಘೋಷಣೆ: ಸಿಎಂಗೆ ಮುರಿಗೆಪ್ಪ ಮಾಲಗಾರ ಅಭಿನಂದನೆ

09/03/2022, 09:11

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಳಿ-  ಮಾಲಗಾರ ಸಮಾಜ ಸೇರಿ 9 ಹಿಂದುಳಿದ ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ ಬಡವರ ಬಂದು   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಾಗೂ ಮಾಲಗಾರ ಸಮಾಜದ ಬೇಡಿಕೆ ಈಡೇರಿಸಲಿಕ್ಕೆ ಮೊದಲು ಸಹಕರಿಸಿದ   ಕೆ ಎಮ್ ಅಧ್ಯಕ್ಷ ಹಾಗೂ ಅರಬಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಾಳಿ / ಮಾಲಗಾರ ಸಮಾಜ ಹಾಗೂ ಹಳ್ಳೂರ ಗ್ರಾಮದ  ಯುವ ಮುಖಂಡ ಸಮಾಜ ಸೇವಕ ಮುರಿಗೆಪ್ಪ ಮಾಲಗಾರ ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ. 

ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ 2022-23ನೇ  ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿರುವ  25ರಿಂದ 30 ಲಕ್ಷ ಜನಸಂಖ್ಯೆ ಹೊಂದಿರುವ ರಾಜಕೀಯ, ಸಾಮಾಜಿಕವಾಗಿ ಹಿಂದುಳಿದ  ಮಾಲಗಾರ -ಮಾಳಿ ಸಮಾಜದ ಬಹುದಿನಗಳ ಬೇಡಿಕೆಯಾದ ನೀಲೂರು ನಿಂಬೆಕ್ಕಾದೇವಿ ಜನ್ಮ ಸ್ಥಳ ಅಭಿವೃದ್ಧಿ ಪಡಿಸುವುದು, ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆಯವರ ಹೆಸರಿನಲ್ಲಿ ವಾರ್ಷಿಕ ರಾಜ್ಯ ಪ್ರಶಸ್ತಿ ನೀಡುವುದು ಹಾಗೂ ಮಾಳಿ-  ಮಾಲಗಾರ ಸಮಾಜ ಸೇರಿ 9 ಹಿಂದುಳಿದ  ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯವರಿಗೆ ಮೊದಲು ಬೇಡಿಕೆ ಈಡೇರಿಸಲು ಪತ್ರ ಕಳುಹಿಸಿದ ಕುಡಚಿ ಶಾಸಕ ಪಿ ರಾಜೀವ ಸೇರಿದಂತೆ ಸಮಾಜದ  ಬೇಡಿಕೆ ಈಡೇರಿಸಲಿಕ್ಕೆ ಸರಕಾರಕ್ಕೆ ಸಲಹೆ ನೀಡಿದ ಶಾಸಕರು, ಸಚಿವರು, ವಿಧಾನ ಪರಿಷತ್ ಸದಸ್ಯರು, ಸಮಾಜದ ಮುಖಂಡರಿಗೆ ಮಾಳಿ / ಮಾಲಗಾರ ಸಮಾಜ ಹಾಗೂ ಹಳ್ಳೂರ ಗ್ರಾಮದ  ಯುವ ಮುಖಂಡ ಸಮಾಜ ಸೇವಕ ಮುರಿಗೆಪ್ಪ ಮಾಲಗಾರ ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು