4:09 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಮಾಳಿ-  ಮಾಲಗಾರ ಸಮಾಜದ ಅಭಿವೃದ್ಧಿಗೆ ಅನುದಾನ ಘೋಷಣೆ: ಸಿಎಂಗೆ ಮುರಿಗೆಪ್ಪ ಮಾಲಗಾರ ಅಭಿನಂದನೆ

09/03/2022, 09:11

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಳಿ-  ಮಾಲಗಾರ ಸಮಾಜ ಸೇರಿ 9 ಹಿಂದುಳಿದ ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ ಬಡವರ ಬಂದು   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಾಗೂ ಮಾಲಗಾರ ಸಮಾಜದ ಬೇಡಿಕೆ ಈಡೇರಿಸಲಿಕ್ಕೆ ಮೊದಲು ಸಹಕರಿಸಿದ   ಕೆ ಎಮ್ ಅಧ್ಯಕ್ಷ ಹಾಗೂ ಅರಬಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಾಳಿ / ಮಾಲಗಾರ ಸಮಾಜ ಹಾಗೂ ಹಳ್ಳೂರ ಗ್ರಾಮದ  ಯುವ ಮುಖಂಡ ಸಮಾಜ ಸೇವಕ ಮುರಿಗೆಪ್ಪ ಮಾಲಗಾರ ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ. 

ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ 2022-23ನೇ  ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿರುವ  25ರಿಂದ 30 ಲಕ್ಷ ಜನಸಂಖ್ಯೆ ಹೊಂದಿರುವ ರಾಜಕೀಯ, ಸಾಮಾಜಿಕವಾಗಿ ಹಿಂದುಳಿದ  ಮಾಲಗಾರ -ಮಾಳಿ ಸಮಾಜದ ಬಹುದಿನಗಳ ಬೇಡಿಕೆಯಾದ ನೀಲೂರು ನಿಂಬೆಕ್ಕಾದೇವಿ ಜನ್ಮ ಸ್ಥಳ ಅಭಿವೃದ್ಧಿ ಪಡಿಸುವುದು, ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆಯವರ ಹೆಸರಿನಲ್ಲಿ ವಾರ್ಷಿಕ ರಾಜ್ಯ ಪ್ರಶಸ್ತಿ ನೀಡುವುದು ಹಾಗೂ ಮಾಳಿ-  ಮಾಲಗಾರ ಸಮಾಜ ಸೇರಿ 9 ಹಿಂದುಳಿದ  ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯವರಿಗೆ ಮೊದಲು ಬೇಡಿಕೆ ಈಡೇರಿಸಲು ಪತ್ರ ಕಳುಹಿಸಿದ ಕುಡಚಿ ಶಾಸಕ ಪಿ ರಾಜೀವ ಸೇರಿದಂತೆ ಸಮಾಜದ  ಬೇಡಿಕೆ ಈಡೇರಿಸಲಿಕ್ಕೆ ಸರಕಾರಕ್ಕೆ ಸಲಹೆ ನೀಡಿದ ಶಾಸಕರು, ಸಚಿವರು, ವಿಧಾನ ಪರಿಷತ್ ಸದಸ್ಯರು, ಸಮಾಜದ ಮುಖಂಡರಿಗೆ ಮಾಳಿ / ಮಾಲಗಾರ ಸಮಾಜ ಹಾಗೂ ಹಳ್ಳೂರ ಗ್ರಾಮದ  ಯುವ ಮುಖಂಡ ಸಮಾಜ ಸೇವಕ ಮುರಿಗೆಪ್ಪ ಮಾಲಗಾರ ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು