1:37 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೊರೊನಾ ನಿಯಂತ್ರಣ: ಮಾರ್ಚ್ 27 ರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭ

09/03/2022, 16:26

ಹೊಸದಿಲ್ಲಿ(reporterkarnataka.com):ಅಂತಾರಾಷ್ಟ್ರೀಯ ವಿಮಾನ ಯಾನ  ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ನಾಗರಿಕ ವಿಮಾನಯಾನ ಸಚಿವಾಲಯ, ನಿಯಮಿತ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿವೆ.

ಇನ್ನು ವಿದೇಶಿ ಆಗಮನ ಮತ್ತು ನಿರ್ಗಮನಕ್ಕಾಗಿ ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಪರಿಣಾಮಕಾರಿಯಾದ ಪ್ರಮಾಣಿತ ಕಾರ್ಯಾಚರಣೆ ಕಾರ್ಯವಿಧಾನಗಳನ್ನು ಅನುಸರಿಸಲಿವೆ’ ಎಂದಿದೆ.

ಕೋವಿಡ್-19 ಪ್ರಕರಣಗಳಲ್ಲಿ ನಿರಂತರ ಕುಸಿತವನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ವೈರಸ್ ನಿಂದಾಗಿ ಎರಡು ವರ್ಷಗಳ ವಿರಾಮದ ನಂತರ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳನ್ನು ಪುನರಾರಂಭಿಸುವ ನಿರ್ಧಾರವನ್ನು ನಾಗರಿಕ ವಿಮಾನಯಾನ ಸಚಿವಾಲಯ ತೆಗೆದುಕೊಂಡಿದೆ.

ಅಂದ್ಹಾಗೆ, ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ 2020 ರ ಮಾರ್ಚ್ 23 ರಿಂದ ಭಾರತದಲ್ಲಿ ನಿಗದಿತ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಆದಾಗ್ಯೂ, ಜುಲೈ 2020 ರಿಂದ ಭಾರತ ಮತ್ತು ಸುಮಾರು 40 ದೇಶಗಳ ನಡುವೆ ಬಯೋ ಬಬ್ಬಲ್‌ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಪ್ರಯಾಣಿಕರ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು