7:12 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕೃಷ್ಣರಾಜಪೇಟೆ: ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ; ಎಲ್ಲೆಡೆ ಸಂಭ್ರಮ- ಸಡಗರ

09/03/2022, 17:56

ಮಂಡ್ಯ(reporterkarnataka.com):
ಕೃಷ್ಣರಾಜಪೇಟೆ ತಾಲೂಕಿನ ಹೊಸಹೊಳಲು ಗ್ರಾಮದ ಪುರಾಣ ಪ್ರಸಿದ್ಧವಾದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ಬ್ರಹ್ಮರಥೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ಗೋವಿಂದ, ವೆಂಕಟರಮಣ, ನಮೋ ನಾರಾಯಣ, ನಮೋ ವೆಂಕಟೇಶ ಎಂಬ ಜಯಘೋಷಗಳು ಮುಗಿಲು ಮುಟ್ಟಿದ್ದವು.


ಪುರಸಭೆಯ ಅಧ್ಯಕ್ಷೆ ಮಹಾದೇವಿ ನಂಜುಂಡ, ಉಪಾಧ್ಯಕ್ಷೆ ಗಾಯತ್ರಿ ಸುಬ್ಬಣ್ಣ, ತಹಶೀಲ್ದಾರ್ ಎಂ.ವಿ.ರೂಪಾ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್ ಅವರು ರಥದಲ್ಲಿ ವಿರಾಜಮಾನವಾಗಿದ್ದ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.


ಕೋವಿಡ್  ಹಿನ್ನೆಲೆಯಲ್ಲಿ ರಥೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ತಹಶೀಲ್ದಾರ್ ರೂಪಾ ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಹಬ್ಬ ಹರಿದಿನಗಳು ಹಾಗೂ ರಥೋತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ಹಬ್ಬದ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ ಭಗವಂತನ ನಾಮಸ್ಮರಣೆ ಮಾಡಿದಾಗ ಮನಸ್ಸಿಗೆ ಶಾಂತಿ ನೆಮ್ಮದಿಯು ದೊರೆಯುವ ಜೊತೆಗೆ ಸಾರ್ಥಕತಾ ಭಾವನೆಯು ಮೂಡುತ್ತದೆ ಎಂದು ಹೇಳಿದರು..


ಪುರಸಭೆಯ ಮುಖ್ಯಾಧಿಕಾರಿ ಕುಮಾರ್, ಸದಸ್ಯರಾದ ಹೆಚ್.ಆರ್.ಲೋಕೇಶ್, ಹೆಚ್.ಡಿ.ಅಶೋಕ್, ಶಾಮಿಯಾನ ತಿಮ್ಮೇಗೌಡ, ಗಿರೀಶ್, ಕೆ.ಆರ್.ಹೇಮಂತ್ ಕುಮಾರ್, ಡಿ.ಪ್ರೇಮಕುಮಾರ್, ರವೀಂದ್ರಬಾಬು, ಕಲ್ಪನಾದೇವರಾಜು, ಶೋಭಾ, ‌ರಾಜಸ್ವ ನಿರೀಕ್ಷಕಿ ಚಂದ್ರಕಲಾ, ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಸಮಾಜಸೇವಕರಾದ ಕೆ.ಜಿ.ಸೋಮಶೇಖರ್ ಸೇರಿದಂತೆ ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು