11:43 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ನಿಮ್ಮ ಮಾನಸಿಕ ಒತ್ತಡಗಳನ್ನು ತಂದೆ- ತಾಯಿ, ಆಪ್ತರಲ್ಲಿ ಹಂಚಿಕೊಳ್ಳಿ: ಸಿಐ ಗೋಪಾಲಕೃಷ್ಣ ಭಟ್ 

10/03/2022, 00:06

ಮಂಗಳೂರು(reporterkarnataka.com): ಕೆನರಾ ಕಾಲೇಜ್‌ನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶೇಷ ಜಾಗೃತಿ ಅಪರಾಧ ತಡೆ ಸುರಕ್ಷತಾ ಕ್ರಮಗಳು ಕಾರ್ಯಾಗಾರ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕದ್ರಿ ಠಾಣಾ ವೃತ್ತ ನಿರೀಕ್ಷಕರಾದ ಗೋಪಾಲಕೃಷ್ಣ ಭಟ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನಿಮ್ಮ ಸಹಪಾಠಿಗಳಿಗೆ ವಿಪರೀತ ಚೇಷ್ಟೆ ಅಥವಾ ಹೀಯಾಳಿಸುವುದು ಇತ್ಯಾದಿ ಮಾಡಬಾರದು. ಇಂತಹ ಎಷ್ಟೋ ಪ್ರಕರಣಗಳಲ್ಲಿ ಅದೆಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ನೀವು ಇನ್ನೊಬ್ಬರ ಸಾವಿಗೆ ಕಾರಣರಾಗಬೇಡಿ ಎಂದರು.

ಮೊಬೈಲ್ ಹಾಗೂ ಇತರ ತಾಂತ್ರಿಕ ಸಾಧನಗಳಿಂದ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ, ಈ ವಯ್ಯಸ್ಸಿನಲ್ಲಿ ಮನಸ್ಸು ಚಂಚಲವಾಗಿದ್ದು, ಅದನ್ನು ಸ್ತಿಮಿತದಲ್ಲಿಟ್ಟು ಭವಿಷ್ಯದ ಏಳಿಗೆಗೆ ತುಡಿಯುವಂತೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಅದೇ ರೀತಿ ಸಂಚಾರದ ಸಂದರ್ಭ ಸಾಹಸದ ಬಲೆಗೆ ಬೀಳದೆ ಜಾಗರೂಕರಾಗಿ ದ್ವಿಚಕ್ರ ವಾಹನಗಳನ್ನು ಓಡಿಸಿ, ಹದಿಹರೆಯದ ಆಸೆಗಳಿಗೆ ವಿಪರೀತ ಒತ್ತು ಕೊಟ್ಟು ಜೀವ ಕಳೆದುಕೊಳ್ಳಬೇಡಿ, ನಿಮ್ಮ ಪ್ರಾಣ ನಿಮ್ಮ ಹೆತ್ತ ತಂದೆ ತಾಯಿಗಳ ಭವಿಷ್ಯವನ್ನೆ ಬರಿದುಗೊಳಿಸಬಹುದು ಹಾಗೆಯೆ ದೇಶಕ್ಕೂ ನಷ್ಟವನ್ನು ತಂದೊಡ್ಡಬಹುದು, ಯುವಕರೇ ನಮ್ಮ ದೇಶದ ಆಸ್ತಿಯಾಗಿದ್ದೀರಿ ಎಂದ ಅವರು ಪೋಲಿಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಅಪರಾಧ ಮಾಡಿ ತಪ್ಪಿಸಿಕೊಂಡರು ಪೋಲಿಸರಗೇನು ನಷ್ಟ ಇಲ್ಲ ಅದರಿಂದ ನಿಮ್ಮ ಅಮೂಲ್ಯ ಜೀವನವೇ ಹಾಳಾಗುತ್ತದೆ ಎನ್ನುವುದನ್ನು ಮಾತ್ರ ಮರೆಯಬೇಡಿ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಸೀಮಾ ಪ್ರಭು, ವಾಣಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು