5:39 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಸ್ವ ಉತ್ಪನ್ನ ವ್ಯಾಪಾರ ಮೇಳ: ಪ್ರಜ್ಞಾ ಮತ್ತು ತಂಡ ಪ್ರಥಮ

10/03/2022, 08:59

ಉಪ್ಪಿನಂಗಡಿ(reporterkarnataka.com):

ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಸ್ವ ಉತ್ಪನ್ನ ವ್ಯಾಪಾರ ಮೇಳ ನಡೆಯಿತು. 

ಈ ವ್ಯಾಪಾರ ಮೇಳದಲ್ಲಿ ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾಥಿ೯ಗಳು  ಅನೇಕ ಬಗೆಯ ಕರಕುಶಲ ವಸ್ತುಗಳನ್ನು ಹಾಗೂ ವಿವಿಧ ಬಗೆಯ ಆಹಾರ ಪದಾಥ೯ಗಳ ಉತ್ಪನ್ನಗಳನ್ನು, ಸ್ಥಳೀಯ ಪರಿಸರದಲ್ಲಿ ಸಿಗುವ ಹಣ್ಣುಹಂಪಲುಗಳನ್ನು, ವಿವಿಧ ಬಗೆಯ ಹಣ್ಣುಗಳ ಪಾನೀಯಗಳನ್ನು ಸಿದ್ದಪಡಿಸಿಕೊಂಡು ಮೇಳದಲ್ಲಿ ಪಾಲ್ಗೊಂಡರು.

ಕಾಲೇಜಿನ ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾಥಿ೯ಗಳಿಗೆ ಹಾಗೂ ಎಲ್ಲಾ ಉಪನ್ಯಾಸಕ ವೃಂದದವರಿಗೂ ತಮ್ಮ ಉತ್ಪನ್ನಗಳ ಬಗ್ಗೆ ವಿವರಿಸಿ ವಿಕ್ರಯ ಮಾಡಿದರು. ಅನೇಕ ಬಗೆಯ ಸ್ವ ಉತ್ಪನ್ನಗಳ ಬಗ್ಗೆ ಗ್ರಾಹಕರಿಗೆ ಬಳಕೆಯಾಗುವ ರೀತಿ ಅವುಗಳ ಗುಣಮಟ್ಟದ ಬಗ್ಗೆ ಸೃಜನಶೀಲತೆಯಿಂದ ಪ್ರಸ್ತುತಪಡಿಸಿದ ರೀತಿಯು ಆಕಷ೯ಣೀಯವಾಗಿತ್ತು. 

ಅತೀ ಹೆಚ್ಚು ವಸ್ತುಗಳನ್ನು ವ್ಯಾಪಾರ ಮಾಡುವುದರ ಮೂಲಕ ಪ್ರಜ್ಞಾ ಮತ್ತು ಅವರ ತಂಡ ಪ್ರಥಮ ಸ್ಥಾನವನ್ನು , ಅನುಷಾ ಮತ್ತು ಅವರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ವಾಣಿಜ್ಯ ಸಂಘದ ಸಂಚಾಲಕರಾದ ದಿವ್ಯ.ಕೆ  ಅವರು ಸ್ವ ಉತ್ಪನ್ನ ವ್ಯಾಪಾರ ಮೇಳದ ಕುರಿತು ಮಾಗ೯ದಶ೯ನವನ್ನು ನೀಡಿದರು. ಉಪನ್ಯಾಸಕರಾದ ವೆರೋನಿಕ ಪ್ರಭ , ಡಾ.ನೂರೋಂದಪ್ಪ, ಶೃತಿ ಯವರು ವಿದ್ಯಾಥಿ೯ಗಳಿಗೆ ಸ್ವ ಉತ್ಪನ್ನ ವ್ಯಾಪಾರ ಸಂದಭ೯ದಲ್ಲಿ ಗ್ರಾಹಕರೊಂದಿಗಿನ ಮಾತುಕತೆ,ಭಾಷೆ,ಓಡನಾಟ ಕುರಿತು ಅರಿವು ಮೂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು