11:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ವಿವಿ ಕಾಲೇಜು ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆರಂಭೋತ್ಸವ

10/03/2022, 21:08

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆರಂಭೋತ್ಸವ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಅನುಸೂಯ ರೈ ವಹಿಸಿದ್ದರು. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಸೌಕರ್ಯಗಳನ್ನು ಉಪಯೋಗಿಸಿ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಕಾಲೇಜಿನಿಂದ ನಿರ್ಗಮಿಸುವಾಗ ಜವಾಬ್ದಾರಿಯುತ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು. 


ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ಜಯವಂತ ನಾಯಕ್ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿದ್ಯಾರ್ಥಿಗಳು ದಿನನಿತ್ಯದ ಕಲಿಕೆಯ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನ ನೀಡಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿಭಾಗದ ಉಪನ್ಯಾಸಕರಾದ ಡಾ. ರಾಮಕೃಷ್ಣ ಬಿ.ಎಂ, ಶಮಾ ಹಾಗೂ ಮಧುರ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ತರುವಾಯ ದ್ವಿತೀಯ ತರಗತಿಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಘಟಿಸಿದರು. ನಿಶಿತ್ ಅವರು ಸ್ವಾಗತಿಸಿದರು ಹಾಗೂ ಇರ್ಷಾದ್ ಅವರು ಧನ್ಯವಾದ ಸಮರ್ಪಿಸಿದರು. ದ್ವಿತೀಯ ವರ್ಷದ ವಿದ್ಯಾರ್ಥಿ ಪ್ರಜ್ಞಾ ನಾಯಕ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.



ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದ ವು.

ಇತ್ತೀಚಿನ ಸುದ್ದಿ

ಜಾಹೀರಾತು