4:48 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆ ಫಲಿತಾಂಶ ಕಾಂಗ್ರೆಸ್ ಶವಪೆಟ್ಟಿಗೆಯ ಕೊನೆಯ ಮೊಳೆ: ಶಾಸಕ ವೇದವ್ಯಾಸ ಕಾಮತ್

10/03/2022, 16:02

ಮಂಗಳೂರು(reporterkarnataka.com): ಪಂಚ‌ ರಾಜ್ಯ ಚುನಾವಣೆಯ ಫಲಿತಾಂಶವು ಬಿಜೆಪಿಯ ಅಭಿವೃದ್ಧಿ, ಸಧೃಢ ನಾಯಕತ್ವಕ್ಕೆ ಸಂದ ಗೆಲುವು. ಪಂಜಾಬ್ ಹೊರತುಪಡಿಸಿ ಉಳಿದ 4 ರಾಜ್ಯಗಳಲ್ಲಿ ಬಿಜೆಪಿ ಮತ್ತೆ ಆಡಳಿತಕ್ಕೇರುವ ಮೂಲಕ ದೇಶದ ಜನರಿಗೆ ಬಿಜೆಪಿಯ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ ಎನ್ನುವುದು ಸಾಬೀತಾಗಿದೆ ಎಂದು ಶಾಸಕ‌ ಕಾಮತ್ ಹೇಳಿದ್ದಾರೆ. 

4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಮೂಲಕ ಜನಾಶೀರ್ವಾದ ಪಡೆದಿದೆ. ಅವ್ಯಾಹತವಾಗಿ ಅಪಪ್ರಚಾರ ಮಾಡಿದ ಕಾಂಗ್ರೆಸ್ ಪಕ್ಷವು ಜನರಿಂದ ತಿರಸ್ಕೃತಗೊಂಡು ಮೂಲೆ ಗುಂಪಾಗಿದೆ. ಈ ಪಂಚ ರಾಜ್ಯ ಚುನಾವಣೆಯಲ್ಲಿ ಜನತೆ ಕಾಂಗ್ರೇಸ್ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆದಿದ್ದಾರೆ ಎಂದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಮೆಚ್ಚಿ ಮತ ನೀಡಿದ ಪ್ರತಿಯೊಬ್ಬ ಮತದಾರ ಪ್ರಭುವಿಗೂ ಧನ್ಯವಾದಗಳು ಹಾಗೂ ಗೆದ್ದು ಜನರ ಸೇವೆಗೆ ಆಯ್ಕೆಯಾದ ಎಲ್ಲಾ ಶಾಸಕರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು