11:26 PM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಜೇಸಿಐ ಬಿ.ಸಿ.ರೋಡ್ ವತಿಯಿಂದ ಮಹಿಳಾ ದಿನಾಚರಣೆ: ಸಾಧಕಿಯರಿಬ್ಬರಿಗೆ ಸನ್ಮಾನ

10/03/2022, 19:11

ಬಂಟ್ವಾಳ(reporterkarnataka.com): ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ  ಜೇಸಿಐ ಬಿ.ಸಿ.ರೋಡ್ ಪವರ್ ಸ್ಟಾರ್” ವತಿಯಿಂದ ಮಹಿಳಾ ಸಾಧಕಿಯರಿಬ್ಬರನ್ನು ಸನ್ಮಾನಿಸಲಾಯಿತು.

ಗಾಂದೋಡಿನ ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ವರುಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಂಸ್ಕೃತಿಕ ಸಂಘಟಕಿ, ಸಾಮಾಜಿಕ‌ ಕಾರ್ಯಕರ್ತೆ ಸರೋಜಾ ಪ್ರಕಾಶ್ ಹಾಗೂ ಹೋಮಿಯೋಪತಿ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸೆ ವಿಷಯದಲ್ಲಿ  4ನೇ ಶ್ರೇಣಿ ಪಡೆದು ತೇರ್ಗಡೆ ಹೊಂದಿರುವ ಸಾಧಕಿ ಡಾ. ಪ್ರಣಮ್ಯ ಜೈನ್ ರಾಯಿ  ಅವರನ್ನು‌ ಸನ್ಮಾನಿಸಿ‌ ಅಭಿನಂದಿಸಲಾಯಿತು. 

ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಕಾಡುಮಠ ವಹಿಸಿದ್ದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಹೇಮಚಂದ್ರ ಶೆಟ್ಟಿಗಾರ್,ಜಗದೀಶ್ ಕೊಯಿಲ,ರಾಘವೇಂದ್ರ ರಾಯಿ, ಸತೀಶ್ ಕೊಯಿಲ,ರೀಟಾ ಮಾರಿಯಾ ಮೆನೇಜಸ್  ಉಪಸ್ಥಿತರಿದ್ದರು.   ಸರೋಜಾ ಪ್ರಕಾಶ್ ಅವರನ್ನು ಅಂಗನವಾಡಿ ಕೇಂದ್ರದಲ್ಲಿ ಹಾಗೂ ಡಾ. ಪ್ರಣಮ್ಯ ಜೈನ್ ರಾಯಿ ಅವರನ್ನು‌ ಅವರ ಸ್ವಗೃಹದಲ್ಲಿ ಅಭಿನಂದಿಸಲಾಯಿತು. ಭವಾನಿ ಶೆಟ್ಟಿ ,ಸುಭಾಶ್ ರೈ, ಸತೀಶ್ ಸಂಪಾಜೆ,ಮಹೇಶ್ ಶೆಟ್ಟಿ, ವಿದ್ಯಾ ಎಸ್. ರೈ ಉಪಸ್ಥಿತರಿದ್ದರು. ಆಶಾ ದಿನೇಶ್ ಶೆಟ್ಟಿ ಹಾಗೂ ಮರೀಟಾ ಕ್ರಿಸ್ಟಿನ್ ಡಿಸೋಜಾ ಸನ್ಮಾನಿತರ ಪರಿಚಯಿಸಿದರು. 

ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು