2:23 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಜೇಸಿಐ ಬಿ.ಸಿ.ರೋಡ್ ವತಿಯಿಂದ ಮಹಿಳಾ ದಿನಾಚರಣೆ: ಸಾಧಕಿಯರಿಬ್ಬರಿಗೆ ಸನ್ಮಾನ

10/03/2022, 19:11

ಬಂಟ್ವಾಳ(reporterkarnataka.com): ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ  ಜೇಸಿಐ ಬಿ.ಸಿ.ರೋಡ್ ಪವರ್ ಸ್ಟಾರ್” ವತಿಯಿಂದ ಮಹಿಳಾ ಸಾಧಕಿಯರಿಬ್ಬರನ್ನು ಸನ್ಮಾನಿಸಲಾಯಿತು.

ಗಾಂದೋಡಿನ ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ವರುಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಂಸ್ಕೃತಿಕ ಸಂಘಟಕಿ, ಸಾಮಾಜಿಕ‌ ಕಾರ್ಯಕರ್ತೆ ಸರೋಜಾ ಪ್ರಕಾಶ್ ಹಾಗೂ ಹೋಮಿಯೋಪತಿ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸೆ ವಿಷಯದಲ್ಲಿ  4ನೇ ಶ್ರೇಣಿ ಪಡೆದು ತೇರ್ಗಡೆ ಹೊಂದಿರುವ ಸಾಧಕಿ ಡಾ. ಪ್ರಣಮ್ಯ ಜೈನ್ ರಾಯಿ  ಅವರನ್ನು‌ ಸನ್ಮಾನಿಸಿ‌ ಅಭಿನಂದಿಸಲಾಯಿತು. 

ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಕಾಡುಮಠ ವಹಿಸಿದ್ದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಹೇಮಚಂದ್ರ ಶೆಟ್ಟಿಗಾರ್,ಜಗದೀಶ್ ಕೊಯಿಲ,ರಾಘವೇಂದ್ರ ರಾಯಿ, ಸತೀಶ್ ಕೊಯಿಲ,ರೀಟಾ ಮಾರಿಯಾ ಮೆನೇಜಸ್  ಉಪಸ್ಥಿತರಿದ್ದರು.   ಸರೋಜಾ ಪ್ರಕಾಶ್ ಅವರನ್ನು ಅಂಗನವಾಡಿ ಕೇಂದ್ರದಲ್ಲಿ ಹಾಗೂ ಡಾ. ಪ್ರಣಮ್ಯ ಜೈನ್ ರಾಯಿ ಅವರನ್ನು‌ ಅವರ ಸ್ವಗೃಹದಲ್ಲಿ ಅಭಿನಂದಿಸಲಾಯಿತು. ಭವಾನಿ ಶೆಟ್ಟಿ ,ಸುಭಾಶ್ ರೈ, ಸತೀಶ್ ಸಂಪಾಜೆ,ಮಹೇಶ್ ಶೆಟ್ಟಿ, ವಿದ್ಯಾ ಎಸ್. ರೈ ಉಪಸ್ಥಿತರಿದ್ದರು. ಆಶಾ ದಿನೇಶ್ ಶೆಟ್ಟಿ ಹಾಗೂ ಮರೀಟಾ ಕ್ರಿಸ್ಟಿನ್ ಡಿಸೋಜಾ ಸನ್ಮಾನಿತರ ಪರಿಚಯಿಸಿದರು. 

ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು