6:04 AM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಜೇಸಿಐ ಬಿ.ಸಿ.ರೋಡ್ ವತಿಯಿಂದ ಮಹಿಳಾ ದಿನಾಚರಣೆ: ಸಾಧಕಿಯರಿಬ್ಬರಿಗೆ ಸನ್ಮಾನ

10/03/2022, 19:11

ಬಂಟ್ವಾಳ(reporterkarnataka.com): ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ  ಜೇಸಿಐ ಬಿ.ಸಿ.ರೋಡ್ ಪವರ್ ಸ್ಟಾರ್” ವತಿಯಿಂದ ಮಹಿಳಾ ಸಾಧಕಿಯರಿಬ್ಬರನ್ನು ಸನ್ಮಾನಿಸಲಾಯಿತು.

ಗಾಂದೋಡಿನ ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ವರುಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಂಸ್ಕೃತಿಕ ಸಂಘಟಕಿ, ಸಾಮಾಜಿಕ‌ ಕಾರ್ಯಕರ್ತೆ ಸರೋಜಾ ಪ್ರಕಾಶ್ ಹಾಗೂ ಹೋಮಿಯೋಪತಿ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸೆ ವಿಷಯದಲ್ಲಿ  4ನೇ ಶ್ರೇಣಿ ಪಡೆದು ತೇರ್ಗಡೆ ಹೊಂದಿರುವ ಸಾಧಕಿ ಡಾ. ಪ್ರಣಮ್ಯ ಜೈನ್ ರಾಯಿ  ಅವರನ್ನು‌ ಸನ್ಮಾನಿಸಿ‌ ಅಭಿನಂದಿಸಲಾಯಿತು. 

ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಕಾಡುಮಠ ವಹಿಸಿದ್ದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಹೇಮಚಂದ್ರ ಶೆಟ್ಟಿಗಾರ್,ಜಗದೀಶ್ ಕೊಯಿಲ,ರಾಘವೇಂದ್ರ ರಾಯಿ, ಸತೀಶ್ ಕೊಯಿಲ,ರೀಟಾ ಮಾರಿಯಾ ಮೆನೇಜಸ್  ಉಪಸ್ಥಿತರಿದ್ದರು.   ಸರೋಜಾ ಪ್ರಕಾಶ್ ಅವರನ್ನು ಅಂಗನವಾಡಿ ಕೇಂದ್ರದಲ್ಲಿ ಹಾಗೂ ಡಾ. ಪ್ರಣಮ್ಯ ಜೈನ್ ರಾಯಿ ಅವರನ್ನು‌ ಅವರ ಸ್ವಗೃಹದಲ್ಲಿ ಅಭಿನಂದಿಸಲಾಯಿತು. ಭವಾನಿ ಶೆಟ್ಟಿ ,ಸುಭಾಶ್ ರೈ, ಸತೀಶ್ ಸಂಪಾಜೆ,ಮಹೇಶ್ ಶೆಟ್ಟಿ, ವಿದ್ಯಾ ಎಸ್. ರೈ ಉಪಸ್ಥಿತರಿದ್ದರು. ಆಶಾ ದಿನೇಶ್ ಶೆಟ್ಟಿ ಹಾಗೂ ಮರೀಟಾ ಕ್ರಿಸ್ಟಿನ್ ಡಿಸೋಜಾ ಸನ್ಮಾನಿತರ ಪರಿಚಯಿಸಿದರು. 

ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು