6:36 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಜೇಸಿಐ ಬಿ.ಸಿ.ರೋಡ್ ವತಿಯಿಂದ ಮಹಿಳಾ ದಿನಾಚರಣೆ: ಸಾಧಕಿಯರಿಬ್ಬರಿಗೆ ಸನ್ಮಾನ

10/03/2022, 19:11

ಬಂಟ್ವಾಳ(reporterkarnataka.com): ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ  ಜೇಸಿಐ ಬಿ.ಸಿ.ರೋಡ್ ಪವರ್ ಸ್ಟಾರ್” ವತಿಯಿಂದ ಮಹಿಳಾ ಸಾಧಕಿಯರಿಬ್ಬರನ್ನು ಸನ್ಮಾನಿಸಲಾಯಿತು.

ಗಾಂದೋಡಿನ ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ವರುಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಂಸ್ಕೃತಿಕ ಸಂಘಟಕಿ, ಸಾಮಾಜಿಕ‌ ಕಾರ್ಯಕರ್ತೆ ಸರೋಜಾ ಪ್ರಕಾಶ್ ಹಾಗೂ ಹೋಮಿಯೋಪತಿ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸೆ ವಿಷಯದಲ್ಲಿ  4ನೇ ಶ್ರೇಣಿ ಪಡೆದು ತೇರ್ಗಡೆ ಹೊಂದಿರುವ ಸಾಧಕಿ ಡಾ. ಪ್ರಣಮ್ಯ ಜೈನ್ ರಾಯಿ  ಅವರನ್ನು‌ ಸನ್ಮಾನಿಸಿ‌ ಅಭಿನಂದಿಸಲಾಯಿತು. 

ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಕಾಡುಮಠ ವಹಿಸಿದ್ದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಹೇಮಚಂದ್ರ ಶೆಟ್ಟಿಗಾರ್,ಜಗದೀಶ್ ಕೊಯಿಲ,ರಾಘವೇಂದ್ರ ರಾಯಿ, ಸತೀಶ್ ಕೊಯಿಲ,ರೀಟಾ ಮಾರಿಯಾ ಮೆನೇಜಸ್  ಉಪಸ್ಥಿತರಿದ್ದರು.   ಸರೋಜಾ ಪ್ರಕಾಶ್ ಅವರನ್ನು ಅಂಗನವಾಡಿ ಕೇಂದ್ರದಲ್ಲಿ ಹಾಗೂ ಡಾ. ಪ್ರಣಮ್ಯ ಜೈನ್ ರಾಯಿ ಅವರನ್ನು‌ ಅವರ ಸ್ವಗೃಹದಲ್ಲಿ ಅಭಿನಂದಿಸಲಾಯಿತು. ಭವಾನಿ ಶೆಟ್ಟಿ ,ಸುಭಾಶ್ ರೈ, ಸತೀಶ್ ಸಂಪಾಜೆ,ಮಹೇಶ್ ಶೆಟ್ಟಿ, ವಿದ್ಯಾ ಎಸ್. ರೈ ಉಪಸ್ಥಿತರಿದ್ದರು. ಆಶಾ ದಿನೇಶ್ ಶೆಟ್ಟಿ ಹಾಗೂ ಮರೀಟಾ ಕ್ರಿಸ್ಟಿನ್ ಡಿಸೋಜಾ ಸನ್ಮಾನಿತರ ಪರಿಚಯಿಸಿದರು. 

ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು