12:35 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಅಂತರರಾಜ್ಯ ಕಳ್ಳನ ಸೆರೆ: ಬರೋಬ್ಬರಿ 11 ಪ್ರಕರಣಗಳಲ್ಲಿ ಭಾಗಿ; 52.68 ಲಕ್ಷ ರೂ .ಮೌಲ್ಯದ ಚಿನ್ನಾಭರಣ ವಶ

10/03/2022, 19:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಂತರರಾಜ್ಯ ಕಳ್ಳ ನೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ನಗರ ಠಾಣೆ ಅಪರಾಧ ವಿಭಾಗದ ಪೊಲೀಸರು ನಗದು ಸೇರಿದಂತೆ  52.68 ಲಕ್ಷ ರೂ. ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಹಾಸನ ಜಿಲ್ಲೆ ಮುದಿಗೆರೆ ಗ್ರಾಮದ ರಂಗೇಗೌಡ ಅಲಿಯಾಸ್ ಸಂತೋಷ್ ನನ್ನು  ಬಂಧಿಸಿರುವ ಪೊಲೀಸರು ಭಾರಿ ಬೇಟೆಯಾಡಿದ್ದಾರೆ .

ಚಿಕ್ಕಮಗಳೂರು ನಗರ ಠಾಣೆ ವ್ಯಾಪ್ತಿಯಲ್ಲಿ 4 , ಗ್ರಾಮಾಂತರ ಠಾಣೆ ಕಡೂರು ಹಾಗೂ ಹಾಸನದಲ್ಲಿ ತಲಾ 1 ,ಮೈಸೂರು ಮತ್ತು ಮಂಡ್ಯ ಗಳಲ್ಲಿ ತಲಾ 2 ಪ್ರಕರಣದಲ್ಲಿ ಈತ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯಿಂದ 6 ಸಾವಿರ ರೂ ನಗದು ,44.68 ಲಕ್ಷ ರೂ ಬೆಲೆಬಾಳುವ 899 ಗ್ರಾಂ  ಚಿನ್ನದ ಗಟ್ಟಿ ,1.20 ಲಕ್ಷ ರೂ ಬೆಲೆಬಾಳುವ 166 ಗ್ರಾಂನ ಬೆಳ್ಳಿ ಆಭರಣ ಹಾಗೂ 1ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅಕ್ಷಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ,

ಇತ್ತೀಚಿನ ಸುದ್ದಿ

ಜಾಹೀರಾತು