2:52 PM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 30 ಅಂಗಡಿಗಳ ಪರವಾನಿಗೆ ರದ್ದು; 68,350 ರೂ. ದಂಡ

08/06/2021, 19:27

ಮಂಗಳೂರು(reporterkarnataka news): ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೀಡಿದ ಮಾರ್ಗಸೂಚಿಯನ್ನು ಉಲ್ಲಂಘಿಸಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 78 ಅಂಗಡಿಗಳಿಗೆ 68,350 ರೂ. ದಂಡ ವಿಧಿಸಲಾಗಿದ್ದು, ಇದರ ಪೈಕಿ 30 ಅಂಗಡಿಗಳ ಉದ್ದಿಮೆ ಪರವಾನಿಗೆ ರದ್ದು ಮಾಡಲಾಗಿದೆ.


ಜಿಲ್ಲಾಡಳಿತದ ಮಾರ್ಗಸೂಚಿಗಳನ್ವಯ ಬೆಳ್ಳಗೆ 6 ರಿಂದ 10 ಗಂಟೆಯವೆರೆಗೆ ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಕೆಲವು ಸಂದರ್ಭಗಳಲ್ಲಿ ಅನುಮತಿಸದೆ ಇರುವ ವಸ್ತುಗಳ ಅಂಗಡಿಗಳನ್ನು ಅನಧಿಕೃತವಾಗಿ ತೆರೆದು ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಈ ಹಿನ್ನಲೆಯಲ್ಲಿ ಮಂಗಳವಾರ ಪಾಲಿಕೆಯ ವಿವಿಧ ತಂಡಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕೋವಿಡ್ 19 ಮಾರ್ಗಸೂಚಿ ಉಲ್ಲಂಘಿಸಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಈ 78  ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಬೆಳಗ್ಗೆ 10 ಗಂಟೆಯ ಅವಧಿ ಮೀರಿ ಕೋವಿಡ್ 19 ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕರು ಅನಗತ್ಯ ಸಂಚರಿಸುತ್ತಿರುವವರನ್ನು ತಪಾಸಣೆ ನಡೆಸಿದಾಗ ಅನಗತ್ಯ ಓಡಾಟ ಮಾಡಿದ 19 ಪ್ರಕರಣಗಳಿಗೆ 8050 ರೂ. ದಂಡವನ್ನು ವಿಧಿಸಿ ಎಚ್ಚರಿಕೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು