9:13 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ

11/03/2022, 09:26

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿಯ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ ಬಂದಿದ್ದಾರೆ.

ಮರಳಿ ಬಂದ ಮಕ್ಕಳಿಗೆ ಕುಟುಂಬಸ್ಥರು ಆರತಿ ಎತ್ತಿ ಸ್ವಾಗತ ಕೋರಿದರು.
ಮಕ್ಕಳ ತಬ್ಬಿಕೊಂಡು ತಾಯಿ ತಂದೆ ಬಾವುಕರಾದರು.

ನಾವು ಮರಳಿ ತಾಯ್ನಾಡಿಗೆ ಬರುತ್ತೇವೆ ಎಂಬ ನಂಬಿಕೆ ನಮಗೆ ಇರಲಿಲ್ಲ ಎಂದು ಉಕ್ರೇನಿನ ರಣ ಭೀಕರ ಕಹಾನಿಯನ್ನು ವಿದ್ಯಾರ್ಥಿಗಳು ಬಿಚ್ಚಿಟ್ಟರು.

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ದೇಶಕ್ಕೆ ಹೋದ ಅದೆಷ್ಟೋ ವಿದ್ಯಾರ್ಥಿಗಳಿಗೆ ಭಾರತದ ತ್ರಿರಂಗ ಧ್ವಜ ರಕ್ಷಾ ಕವಚ ವಾಗಿತ್ತು. ನಾವು ನಮ್ಮ ದೇಶದ ಬಾವುಟ ತೋರಿಸಿ ಸುರಕ್ಷಿತವಾಗಿ ನಮ್ಮ

ತಾಯ್ನಾಡಿಗೆ ಬಂದಿದ್ದೇವೆ. ಅದು ಅಲ್ಲಿ ನಮ್ಮ ದೇಶಕ್ಕಿರೋ ಗೌರವ.ಬೇರೆ ದೇಶದವರು ನಮ್ಮ ದೇಶದ ಭಾವುಟ ಹಿಡಿದು ರಕ್ಷಣೆ

ಪಡೆದಿದ್ದಾರೆ. ಇದು ನಮ್ಮ್ ದೇಶದ ತಾಕತ್ತು ಎಂದು ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ ಹಾಗೂ ಆಫ್ರಿನ್ ನಿಡೋಣಿ ಹೇಳಿದರು.

ಮರಳಿ ಬರಲು ಸಹಾಯ ಮಾಡಿದ ಇಂಡಿಯನ್ ಎಂಬೆಸಿ, ಭಾರತ ಸರಕಾರ, ರಾಜ್ಯ ಸರ್ಕಾರಕ್ಕೆ ಮತ್ತು ಅಥಣಿ ಸ್ಥಳೀಯ ತಹಸೀಲ್ದಾರ್ ದುಂಡಪ್ಪ ಕೋಮಾರ ಅವರಿಗೆ ವಿಶೇಷ ಅಭಿನಂದನೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು