11:57 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ

11/03/2022, 12:31

ಮಂಗಳೂರು(reporterkarnataka.com):

ಜ್ಞಾನಪೀಠ ಪ್ರಶಸ್ತಿ ಘೋಷಿತ ಕೊಂಕಣಿ ಲೇಖಕ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ವಿಶ್ವ ಕೊಂಕಣಿ ಕೇಂದ್ರದಲ್ಲಿ ಮಾರ್ಚ್ 20 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ 

ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ ಮತ್ತು ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅಭಿನಂದನಾ ಭಾಷಣವನ್ನು ನೀಡಲಿದ್ದಾರೆ.

19ರಂದು ವಿಶ್ವ ಕೊಂಕಣಿ ಕೇಂದ್ರ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಯ ಜಂಟಿ ಆಯೋಜನೆಯಲ್ಲಿ ಜರಗಲಿರುವ “ಬಸ್ತಿ ವಾಮನ ಶೆಣೈ – ಜೀವನ ಮತ್ತು ಕಾರ್ಯ” ಕುರಿತಾದ ಸಿಂಪೊಸಿಯಮ್ ನಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿರುವ

ದಾಮೋದರ ಮೌಜೊ ಆ ಬಳಿಕ ವಿಶ್ವ ಕೊಂಕಣಿ ಕೇಂದ್ರ ಮತ್ತು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಜಂಟಿ ಆಯೋಜನೆಯಲ್ಲಿ ಜರಗಲಿರುವ ವಿಶ್ವ ಕೊಂಕಣಿ ಸಮಾರೋಪ (ಕೊಂಕಣಿ ಲಿಟ್ ಫೆಸ್ಟ್) ದಲ್ಲಿ “ಕೊಂಕಣಿ ಸಾಹಿತ್ಯ: ಜ್ಞಾನಪೀಠ ಮತ್ತು ಮುಂದಿನ ಹಾದಿ” ಕುರಿತಾಗಿ ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಿರುವರು. ಕೊಂಕಣಿ ಸಾಹಿತಿ ಹೆಚ್. ಎಂ. ಪೆರ್ನಾಲ್ ಈ ಸಂವಾದ ಕಾರ್ಯಕ್ರಮವನ್ನು ನಡೆಸಿಕೊಡಲಿರುವರು.

ಗೋವಾದ ಮಜೋರ್ಡಾದಲ್ಲಿ ವಾಸವಾಗಿರುವ 

ಮೌಜೊ ಕೊಂಕಣಿಯ ಪ್ರಸಿದ್ಧ ಕಾದಂಬರಿಕಾರರಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಗೋವಾ ವಿಮೋಚನೆ, ಅಧಿಕೃತ ರಾಜ್ಯಭಾಷೆ, ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಕೊಂಕಣಿ, ಶಾಲಾ ಶಿಕ್ಷಣದಲ್ಲಿ ಕೊಂಕಣಿ ಮೊದಲಾದ ಅನೇಕ ಹೋರಾಟಗಳಲ್ಲಿ ಮಹತ್ವದ ಪಾತ್ರವನ್ನು ವಹಿಸಿರುವ ಮೌಜೊರವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುವಾದಗೊಂಡು ಪ್ರಸಿದ್ಧವಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು