10:04 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ

11/03/2022, 12:31

ಮಂಗಳೂರು(reporterkarnataka.com):

ಜ್ಞಾನಪೀಠ ಪ್ರಶಸ್ತಿ ಘೋಷಿತ ಕೊಂಕಣಿ ಲೇಖಕ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ವಿಶ್ವ ಕೊಂಕಣಿ ಕೇಂದ್ರದಲ್ಲಿ ಮಾರ್ಚ್ 20 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ 

ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ ಮತ್ತು ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅಭಿನಂದನಾ ಭಾಷಣವನ್ನು ನೀಡಲಿದ್ದಾರೆ.

19ರಂದು ವಿಶ್ವ ಕೊಂಕಣಿ ಕೇಂದ್ರ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಯ ಜಂಟಿ ಆಯೋಜನೆಯಲ್ಲಿ ಜರಗಲಿರುವ “ಬಸ್ತಿ ವಾಮನ ಶೆಣೈ – ಜೀವನ ಮತ್ತು ಕಾರ್ಯ” ಕುರಿತಾದ ಸಿಂಪೊಸಿಯಮ್ ನಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿರುವ

ದಾಮೋದರ ಮೌಜೊ ಆ ಬಳಿಕ ವಿಶ್ವ ಕೊಂಕಣಿ ಕೇಂದ್ರ ಮತ್ತು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಜಂಟಿ ಆಯೋಜನೆಯಲ್ಲಿ ಜರಗಲಿರುವ ವಿಶ್ವ ಕೊಂಕಣಿ ಸಮಾರೋಪ (ಕೊಂಕಣಿ ಲಿಟ್ ಫೆಸ್ಟ್) ದಲ್ಲಿ “ಕೊಂಕಣಿ ಸಾಹಿತ್ಯ: ಜ್ಞಾನಪೀಠ ಮತ್ತು ಮುಂದಿನ ಹಾದಿ” ಕುರಿತಾಗಿ ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಿರುವರು. ಕೊಂಕಣಿ ಸಾಹಿತಿ ಹೆಚ್. ಎಂ. ಪೆರ್ನಾಲ್ ಈ ಸಂವಾದ ಕಾರ್ಯಕ್ರಮವನ್ನು ನಡೆಸಿಕೊಡಲಿರುವರು.

ಗೋವಾದ ಮಜೋರ್ಡಾದಲ್ಲಿ ವಾಸವಾಗಿರುವ 

ಮೌಜೊ ಕೊಂಕಣಿಯ ಪ್ರಸಿದ್ಧ ಕಾದಂಬರಿಕಾರರಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಗೋವಾ ವಿಮೋಚನೆ, ಅಧಿಕೃತ ರಾಜ್ಯಭಾಷೆ, ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಕೊಂಕಣಿ, ಶಾಲಾ ಶಿಕ್ಷಣದಲ್ಲಿ ಕೊಂಕಣಿ ಮೊದಲಾದ ಅನೇಕ ಹೋರಾಟಗಳಲ್ಲಿ ಮಹತ್ವದ ಪಾತ್ರವನ್ನು ವಹಿಸಿರುವ ಮೌಜೊರವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುವಾದಗೊಂಡು ಪ್ರಸಿದ್ಧವಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು