3:06 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

‘ಮಾರ್ಕೆಟಿಂಗ್ ಪ್ರಿನ್ಸಿಪಲ್ಸ್ ಅಂಡ್ ಅಪ್ಲಿಕೇಶನ್’ ವಿಷಯದ ಕುರಿತು ಒಂದು ದಿನದ ಅಧ್ಯಯನ ಪ್ರವಾಸ 

11/03/2022, 18:59

ಸುಬ್ರಹ್ಮಣ್ಯ(reporterkarnataka.com):ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗದಿಂದ “ಮಾರ್ಕೆಟಿಂಗ್ ಪ್ರಿನ್ಸಿಪಲ್ಸ್ ಅಂಡ್ ಅಪ್ಲಿಕೇಶನ್ ” ವಿಷಯದ ಕುರಿತಾದ ಒಂದು ದಿನದ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿತ್ತು.

ಅಂತಾರಾಷ್ಟಿಯ ಹಾಳೆ ತಟ್ಟೆ ರಫ್ತ್ತು ಉದ್ಯಮ ವಿಟ್ಲ ಕೊಡಪದವು ಸಮೀಪದ ರಾಜರಾಮ್ ಒಡೆತನದ ಇಕೋ ಬ್ಳಿಸ್ ಉದ್ಯಮಕ್ಕೆ ಭೇಟಿ ನೀಡಿ ಹಾಳೆ  ತಟ್ಟೆ ಉದ್ಯಮ, ಮಾರುಕಟ್ಟೆ ಸಂವರ್ಧನೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಳೆ  ತಟ್ಟೆ ಬೇಡಿಕೆ,ಪೂರೈಕೆ  ಮತ್ತು ಬೆಲೆಗಳ  ಬಗ್ಗೆ ಮಾಹಿತಿಯನ್ನು ಪಡೆಯಲಾಯಿತು. ಸ್ವದ್ಯೋಗಿಳಿಗೆ  ತಾವೇ ನಿರ್ಮಿಸಿ ವಿನ್ಯಾಸ ಗೊಳಿಸಿದ  ಯಂತ್ರೋಪಕರಣ ಮಾಹಿತಿ ಹಾಗೂ ಸಂಸ್ಥೆಯಲ್ಲಿನ  ಉದ್ಯೋಗಿಗಳಿಗೆ ಕೊಡಮಾಡುವ ಸೌಕರ್ಯ ಗಳ  ಬಗ್ಗೆ ಮಾಹಿತಿ ನೀಡಿದರು. ರಫ್ತ್ತುವಿನ ವಿವಿಧ ಹಂತಗಳ  ಬಗ್ಗೆ ವಿಸ್ತಾರವಾದ  ಮಾಹಿತಿಯನ್ನು ನೀಡಿದರು.ಕಲ್ಲಡ್ಕ ಸಮೀಪದ ಧೀರಜ್  ಹಾಗೂ ಅಜಿತ್ ಒಡೆತನದ ಫಾರ್ಚುನ್ ಪೆಟ್ ಜಾರ್ ಇಂಡಸ್ಟ್ರಿಗೆ ತೆರಳಿ  ವಿವಿಧ  ವಿನ್ಯಾಸದ ಶೀಷೆ ತಯಾರಿಕಾ ಮಾಹಿತಿಯನ್ನು  ಪಡೆಯಲಾಯಿತು. ನಾರಾಯಣ  ಸೋಮಯಾಜಿ ಎರಕಲ ಒಡೆತನದ ಐತಿಹಾಸಿಕ ಬ್ರಹತ್  ಹಂಚು, ಇಟ್ಟಿಗೆ ಮತ್ತು ಟೈಲ್ಸ್ ತಯಾರಿಕ ಘಟಕ ಶ್ರೀಕೃಷ್ಣ ಬ್ರಿಕ್ಸ್ ಅಂಡ್ ಟೈಲ್ಸ್ ಪ್ರೈವೆಟ್. ಲಿ. ಇಲ್ಲಿಗೆ ಭೇಟಿನೀಡಿ  ಸಂಸ್ಥೆಯ  ಇತಿಹಾಸ , ಪ್ರೋಸೆಸ್ಸಿಂಗ್, ಕಾರ್ಖಾನೆಯಲ್ಲಿ ತಯಾರಾಗುವ ವಸ್ತುಗಳು  ಅದರ ಮಾರುಕಟ್ಟೆ ವಿಚಾರದ  ಬಗ್ಗೆ ಮಾಹಿತಿಯನ್ನು ಸಂಸ್ಥೆಯ ವಿದ್ಯಾರ್ಥಿಗಳು ಪಡೆದು  ಕೊಂಡರು

 ಪ್ರಥಮ  ಬಿ. ಕಾಮ್ ಹಾಗೂ ಬಿ. ಬಿ. ಎ ಯ  ಒಟ್ಟು 123 ವಿದ್ಯಾರ್ಥಿ ಅಧ್ಯಯನ ಪ್ರವಾಸದಲ್ಲಿ  ಪಾಲ್ಗೊಂಡಿದ್ದು, ಸಂಸ್ಥೆಯ  ವಾಣಿಜ್ಯ  ಹಾಗೂ ಉದ್ಯಮಾಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ರಮಾನಾಥ್. ಎ, ಶಿವಪ್ರಸಾದ್. ಎಸ್ ಮತ್ತು ಕೃತಿಕಾ ಪಿ.ಎಸ್ ಮಾರ್ಗದರ್ಶನ  ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು