1:14 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶದ ದುಸ್ಥಿತಿ ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಎದುರಾಗಲಿದೆ: ಸಿ.ಎಂ. ಇಬ್ರಾಹಿಂ ಭವಿಷ್ಯ

12/03/2022, 12:10

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಪಂಚ ರಾಜ್ಯ ಚುನಾವಣೆಯಲ್ಲಿ ನಾನು ಮೊದಲ ಹೇಳಿದಂತೆ ಭವಿಷ್ಯ ನಿಜವಾಗಿದೆ. ಕಾಂಗ್ರೆಸ್ ನೆಲಕಚ್ಚಿದೆ , 73 ವರ್ಷಗಳ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಂತಹ ಹೀನಾಯ ಪರಿಸ್ಥಿತಿ ಬಂದಿರಲಿಲ್ಲ. 

ಕರ್ನಾಟಕದಲ್ಲೂ ಸಹ ಕಾಂಗ್ರೆಸ್‌ಗೆ ಮುಂದಿನ ವಿಧಾನಸಭಾ ಇಂತಹ ದುಸ್ಥಿತಿ ಚುನಾವಣೆಯಲ್ಲಿ ಬಂದದೊಗಲಿದೆಯೆಂದು ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಎಂ. ಇಬ್ರಾಹಿಂ ಹೇಳಿದರು.

ಅವರು ನಗರ ಹೊರ ವಲಯದ ಎಪಿಎಂಸಿ ಮಾರುಕಟ್ಟೆ ಬಳಿಯಿರುವ ಅಂಜುಮಾನ್ ಕಮಿಟಿ ಉಪಾಧ್ಯಕ್ಷ ಮುಸ್ತಫಾರವರ ಎಂ. ಕೆ. ಟ್ರಾಕ್ಟರ್ ಶೋ ರೂಂಗೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಅವರು ಉತ್ಕರಿಸಿದರು.

ಪ್ರಿಯಾಂಕ ವಾರ್ದಾರವರು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಎಂಬ ಬೆಳೆಯನ್ನು ಬೆಳೆದರೂ ಬೆಳೆ ಕೊಯ್ಯುಯುವುದಕ್ಕೆ ಯಾವ ಕಾಂಗ್ರೆಸ್ ಕಾರ್ಯಕರ್ತರು ನೆರವಿಗೆ ಬರಲಿಲ್ಲ . ಉತ್ತರಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಎರಡು ಸೀಟುಗಳನ್ನು ಗೆಲ್ಲುವ ಹೀನಾಯ ಸ್ಥಿತಿಗೆ ಕಾಂಗ್ರೆಸ್ ತಲುಪಿದೆಯೆಂದು ಅಭಿಪ್ರಾಯ ಪಟ್ಟರು. ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷವು ತಮ್ಮ ಸ್ವಯಂಕೃತ ಅಪರಾಧದಿಂದ ಹಿಂದೆ ನಡೆದ ಚುನಾವಣೆಗಿಂತ ಈಗಿನ ಚುನಾವಣೆಯಲ್ಲಿ 73 ಸೀಟುಗಳನ್ನು ಕಳೆದುಕೊಂಡಿದೆ . 

ಕರ್ನಾಟಕದಲ್ಲೂ ಸಹ ಕಾಂಗ್ರೆಸ್‌ಗೆ ಮುಂದಿನ ವಿಧಾನಸಭಾ ಇಂತಹ ದುಸ್ಥಿತಿ ಚುನಾವಣೆಯಲ್ಲಿ ಬಂದದೊಗಲಿದೆಯೆಂದು ಭವಿಷ್ಯ ನುಡಿದರು. 

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಸವತತ್ವ ಸರ್ಕಾರ ಕರ್ನಾಟಕದಲ್ಲಿ ಬರಲಿದ್ದು , ಬಿಜೆಪಿ ಎರಡನೇ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಹೋಗಲಿದ್ದು , ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು ಎಂದು ಬಣ್ಣಿಸಿದರಲ್ಲದೆ , ಹಿಂದೆ ಕೋಲಾರ ಲೋಕ ಸಭಾ ಚುನಾವಣೆ ನಡೆದಾಗ ಕೆ. ಎಚ್. ಮುನಿಯಪ್ಪರವರನ್ನು ಕಾಂಗ್ರೆಸ್ ಪಕ್ಷದ ಶಾಸಕರೇ ಸೋಲಿಸಿದರು , ಮುನಿಯಪ್ಪರವರ ಪರವಾಗಿ ನಾನು ಚುನಾವಣೆ ಪ್ರಚಾರಕ್ಕೆ ಬಂದಿದ್ದೆ ಎಂದರು .

ಮೇಕೆದಾಟು ಯೋಜನೆಯ ಪಾದಯಾತ್ರೆ ಸಂಪೂರ್ಣ ವಿಫಲವಾಗಿದ್ದು , ಇದಕ್ಕೆ ರಾಜ್ಯದ ಜನಬೆಂಬಲ ಪಕ್ಷಕ್ಕೆ ದೊರೆತಿರುವುದಿಲ್ಲ . ನಾನು ಹಿಂದೆ ಬಳ್ಳಾರಿ ಪಾದಯಾತ್ರೆ ಮಾಡಿದ್ದಾಗ ಜನ ಬೆಂಬಲ ದೊರೆತು ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬ೦ದು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆಂದು ವಿವರಿಸಿದರು . ನಾನು ಯಾವ ಪಕ್ಷಕ್ಕೆ ಹೋಗುತ್ತೇನೆಂದು ನಾಳೆ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ , ನಂತರ ಬೆಂಗಳೂರಿನಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆಂದು ತಿಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು