3:34 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಮಾರ್ಚ್ 15: ಬೆಂಗಳೂರಿನಲ್ಲಿ ಪಂಚಮಸಾಲಿ ದುಂಡು ಮೇಜಿನ ಪರಿಷತ್; ಮೀಸಲಾತಿ ಹೋರಾಟಕ್ಕೆ ರೂಪುರೇಷೆ

13/03/2022, 10:18

ಬೆಂಗಳೂರು(reporterkarnataka.com):ಪಂಚಮ ಸಾಲಿ ದುಂಡು ಮೇಜಿನ ಪರಿಷತ್ತು ಹಾಗೂ  ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ( ಲಿಂಗಾಯತ ಗೌಡ ಮಲೆಗೌಡ ದೀಕ್ಷಾ ಲಿಂಗಾಯತ)ಮೀಸಲಾತಿ ಚಳುವಳಿಗಾರರ ಸಭೆ ಬೆಂಗಳೂರಲ್ಲಿ ಮಾರ್ಚ್15ರಂದು ಬೆಂಗಳೂರಿನ ರಾಜಭವನ ರಸ್ತೆಯಲ್ಕಿರುವ ಪರಾಗ್ ಹೊಟೇಲ್ ನಲ್ಲಿ ನಡೆಯಲಿದೆ. 

ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಕೂಡಲಸಂಗಮ ಪ್ರಥಮ ಜಗದ್ಗುರುಗಳ ನೇತೃತ್ವದ ಸತ್ಯಾಗ್ರಹ ಸಂಧರ್ಭದಲ್ಲಿ ಸರಕಾರ ಕೊಟ್ಟ ಭರವಸೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಕುರಿತು ಸಿದ್ದತಾ ಸಭೆ ನಡೆಯಲಿದೆ.

ಪಂಚಮಸಾಲಿ ಮೀಸಲಾತಿ ಪಾದಯಾತ್ರೆ ಪ್ರವರ್ತಕ, ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ ಧರ್ಮಕ್ಷೇತ್ರ ಕೂಡಲಸಂಗಮ ಇದರ ಪ್ರಥಮ ಜಗದ್ಗುರು ಶ್ರಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಪಸ್ಥಿತರಿರುವರು.

ಸಭೆಯಲ್ಲಿ ಹಾಲಿ -ಮಾಜಿ ಜನಪ್ರತಿನಿಧಿಗಳು,ಅ.ಭಾ.ಲಿಂ.ಪಂಚಮಸಾಲಿ ಟ್ರಸ್ಟ್ , ಯವ ಘಟಕ, ಪಂಚ ಸೇನಾ, ಮಹಿಳಾ ಚನ್ನಮ್ಮ ನ ಬಳಗ , ರೈತ ಘಟಕ, ಎಲ್ ಪಿ ವಿ ಪಿ ಘಟಕ, ವೈದ್ಯಕೀಯ ಘಟಕ, ಸಾಮಾಜಿಕ ಜಾಲತಾಣ ಘಟಕ , ಐಟಿಬಿಟಿ ಘಟಕ ,ಸಾಹಿತ್ಯ ಘಟಕ , ಕಾನೂನು ಘಟಕ, ದಾಸೊಹ ಘಟಕ ವಿವಿಧ ರಾಷ್ಟ್ರೀಯ, ರಾಜ್ಯ ,ಜಿಲ್ಲಾ ,ತಾಲೂಕು ,ನಗರ ಘಟಕಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.


ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್,  ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರು, ಎಚ್ ಎಸ್ ಶಿವಶಂಕರ, ಮಾಜಿ ಮೇಯರ್ ಪುಟ್ಟರಾಜು, ಡಾ.ಬಿ.ಎಸ್.ಪಾಟೀಲ್ ನಾಗರಲ್ ಹುಲಿ,  ಕಿರಣ್ ಪಾಟೀಲ, ಶಿವಕುಮಾರ್ ಮೇಟಿ ಮುಂತಾದವರು ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು