10:26 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮಾರ್ಚ್ 15: ಬೆಂಗಳೂರಿನಲ್ಲಿ ಪಂಚಮಸಾಲಿ ದುಂಡು ಮೇಜಿನ ಪರಿಷತ್; ಮೀಸಲಾತಿ ಹೋರಾಟಕ್ಕೆ ರೂಪುರೇಷೆ

13/03/2022, 10:18

ಬೆಂಗಳೂರು(reporterkarnataka.com):ಪಂಚಮ ಸಾಲಿ ದುಂಡು ಮೇಜಿನ ಪರಿಷತ್ತು ಹಾಗೂ  ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ( ಲಿಂಗಾಯತ ಗೌಡ ಮಲೆಗೌಡ ದೀಕ್ಷಾ ಲಿಂಗಾಯತ)ಮೀಸಲಾತಿ ಚಳುವಳಿಗಾರರ ಸಭೆ ಬೆಂಗಳೂರಲ್ಲಿ ಮಾರ್ಚ್15ರಂದು ಬೆಂಗಳೂರಿನ ರಾಜಭವನ ರಸ್ತೆಯಲ್ಕಿರುವ ಪರಾಗ್ ಹೊಟೇಲ್ ನಲ್ಲಿ ನಡೆಯಲಿದೆ. 

ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಕೂಡಲಸಂಗಮ ಪ್ರಥಮ ಜಗದ್ಗುರುಗಳ ನೇತೃತ್ವದ ಸತ್ಯಾಗ್ರಹ ಸಂಧರ್ಭದಲ್ಲಿ ಸರಕಾರ ಕೊಟ್ಟ ಭರವಸೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಕುರಿತು ಸಿದ್ದತಾ ಸಭೆ ನಡೆಯಲಿದೆ.

ಪಂಚಮಸಾಲಿ ಮೀಸಲಾತಿ ಪಾದಯಾತ್ರೆ ಪ್ರವರ್ತಕ, ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ ಧರ್ಮಕ್ಷೇತ್ರ ಕೂಡಲಸಂಗಮ ಇದರ ಪ್ರಥಮ ಜಗದ್ಗುರು ಶ್ರಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಪಸ್ಥಿತರಿರುವರು.

ಸಭೆಯಲ್ಲಿ ಹಾಲಿ -ಮಾಜಿ ಜನಪ್ರತಿನಿಧಿಗಳು,ಅ.ಭಾ.ಲಿಂ.ಪಂಚಮಸಾಲಿ ಟ್ರಸ್ಟ್ , ಯವ ಘಟಕ, ಪಂಚ ಸೇನಾ, ಮಹಿಳಾ ಚನ್ನಮ್ಮ ನ ಬಳಗ , ರೈತ ಘಟಕ, ಎಲ್ ಪಿ ವಿ ಪಿ ಘಟಕ, ವೈದ್ಯಕೀಯ ಘಟಕ, ಸಾಮಾಜಿಕ ಜಾಲತಾಣ ಘಟಕ , ಐಟಿಬಿಟಿ ಘಟಕ ,ಸಾಹಿತ್ಯ ಘಟಕ , ಕಾನೂನು ಘಟಕ, ದಾಸೊಹ ಘಟಕ ವಿವಿಧ ರಾಷ್ಟ್ರೀಯ, ರಾಜ್ಯ ,ಜಿಲ್ಲಾ ,ತಾಲೂಕು ,ನಗರ ಘಟಕಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.


ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್,  ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರು, ಎಚ್ ಎಸ್ ಶಿವಶಂಕರ, ಮಾಜಿ ಮೇಯರ್ ಪುಟ್ಟರಾಜು, ಡಾ.ಬಿ.ಎಸ್.ಪಾಟೀಲ್ ನಾಗರಲ್ ಹುಲಿ,  ಕಿರಣ್ ಪಾಟೀಲ, ಶಿವಕುಮಾರ್ ಮೇಟಿ ಮುಂತಾದವರು ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು