1:34 PM Tuesday14 - October 2025
ಬ್ರೇಕಿಂಗ್ ನ್ಯೂಸ್
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್…

ಇತ್ತೀಚಿನ ಸುದ್ದಿ

ಮಾರ್ಚ್ 15: ಬೆಂಗಳೂರಿನಲ್ಲಿ ಪಂಚಮಸಾಲಿ ದುಂಡು ಮೇಜಿನ ಪರಿಷತ್; ಮೀಸಲಾತಿ ಹೋರಾಟಕ್ಕೆ ರೂಪುರೇಷೆ

13/03/2022, 10:18

ಬೆಂಗಳೂರು(reporterkarnataka.com):ಪಂಚಮ ಸಾಲಿ ದುಂಡು ಮೇಜಿನ ಪರಿಷತ್ತು ಹಾಗೂ  ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ( ಲಿಂಗಾಯತ ಗೌಡ ಮಲೆಗೌಡ ದೀಕ್ಷಾ ಲಿಂಗಾಯತ)ಮೀಸಲಾತಿ ಚಳುವಳಿಗಾರರ ಸಭೆ ಬೆಂಗಳೂರಲ್ಲಿ ಮಾರ್ಚ್15ರಂದು ಬೆಂಗಳೂರಿನ ರಾಜಭವನ ರಸ್ತೆಯಲ್ಕಿರುವ ಪರಾಗ್ ಹೊಟೇಲ್ ನಲ್ಲಿ ನಡೆಯಲಿದೆ. 

ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಕೂಡಲಸಂಗಮ ಪ್ರಥಮ ಜಗದ್ಗುರುಗಳ ನೇತೃತ್ವದ ಸತ್ಯಾಗ್ರಹ ಸಂಧರ್ಭದಲ್ಲಿ ಸರಕಾರ ಕೊಟ್ಟ ಭರವಸೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಕುರಿತು ಸಿದ್ದತಾ ಸಭೆ ನಡೆಯಲಿದೆ.

ಪಂಚಮಸಾಲಿ ಮೀಸಲಾತಿ ಪಾದಯಾತ್ರೆ ಪ್ರವರ್ತಕ, ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ ಧರ್ಮಕ್ಷೇತ್ರ ಕೂಡಲಸಂಗಮ ಇದರ ಪ್ರಥಮ ಜಗದ್ಗುರು ಶ್ರಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಪಸ್ಥಿತರಿರುವರು.

ಸಭೆಯಲ್ಲಿ ಹಾಲಿ -ಮಾಜಿ ಜನಪ್ರತಿನಿಧಿಗಳು,ಅ.ಭಾ.ಲಿಂ.ಪಂಚಮಸಾಲಿ ಟ್ರಸ್ಟ್ , ಯವ ಘಟಕ, ಪಂಚ ಸೇನಾ, ಮಹಿಳಾ ಚನ್ನಮ್ಮ ನ ಬಳಗ , ರೈತ ಘಟಕ, ಎಲ್ ಪಿ ವಿ ಪಿ ಘಟಕ, ವೈದ್ಯಕೀಯ ಘಟಕ, ಸಾಮಾಜಿಕ ಜಾಲತಾಣ ಘಟಕ , ಐಟಿಬಿಟಿ ಘಟಕ ,ಸಾಹಿತ್ಯ ಘಟಕ , ಕಾನೂನು ಘಟಕ, ದಾಸೊಹ ಘಟಕ ವಿವಿಧ ರಾಷ್ಟ್ರೀಯ, ರಾಜ್ಯ ,ಜಿಲ್ಲಾ ,ತಾಲೂಕು ,ನಗರ ಘಟಕಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.


ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್,  ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರು, ಎಚ್ ಎಸ್ ಶಿವಶಂಕರ, ಮಾಜಿ ಮೇಯರ್ ಪುಟ್ಟರಾಜು, ಡಾ.ಬಿ.ಎಸ್.ಪಾಟೀಲ್ ನಾಗರಲ್ ಹುಲಿ,  ಕಿರಣ್ ಪಾಟೀಲ, ಶಿವಕುಮಾರ್ ಮೇಟಿ ಮುಂತಾದವರು ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು