1:36 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಾರ್ಚ್ 15: ಬೆಂಗಳೂರಿನಲ್ಲಿ ಪಂಚಮಸಾಲಿ ದುಂಡು ಮೇಜಿನ ಪರಿಷತ್; ಮೀಸಲಾತಿ ಹೋರಾಟಕ್ಕೆ ರೂಪುರೇಷೆ

13/03/2022, 10:18

ಬೆಂಗಳೂರು(reporterkarnataka.com):ಪಂಚಮ ಸಾಲಿ ದುಂಡು ಮೇಜಿನ ಪರಿಷತ್ತು ಹಾಗೂ  ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ( ಲಿಂಗಾಯತ ಗೌಡ ಮಲೆಗೌಡ ದೀಕ್ಷಾ ಲಿಂಗಾಯತ)ಮೀಸಲಾತಿ ಚಳುವಳಿಗಾರರ ಸಭೆ ಬೆಂಗಳೂರಲ್ಲಿ ಮಾರ್ಚ್15ರಂದು ಬೆಂಗಳೂರಿನ ರಾಜಭವನ ರಸ್ತೆಯಲ್ಕಿರುವ ಪರಾಗ್ ಹೊಟೇಲ್ ನಲ್ಲಿ ನಡೆಯಲಿದೆ. 

ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಕೂಡಲಸಂಗಮ ಪ್ರಥಮ ಜಗದ್ಗುರುಗಳ ನೇತೃತ್ವದ ಸತ್ಯಾಗ್ರಹ ಸಂಧರ್ಭದಲ್ಲಿ ಸರಕಾರ ಕೊಟ್ಟ ಭರವಸೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಕುರಿತು ಸಿದ್ದತಾ ಸಭೆ ನಡೆಯಲಿದೆ.

ಪಂಚಮಸಾಲಿ ಮೀಸಲಾತಿ ಪಾದಯಾತ್ರೆ ಪ್ರವರ್ತಕ, ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ ಧರ್ಮಕ್ಷೇತ್ರ ಕೂಡಲಸಂಗಮ ಇದರ ಪ್ರಥಮ ಜಗದ್ಗುರು ಶ್ರಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಪಸ್ಥಿತರಿರುವರು.

ಸಭೆಯಲ್ಲಿ ಹಾಲಿ -ಮಾಜಿ ಜನಪ್ರತಿನಿಧಿಗಳು,ಅ.ಭಾ.ಲಿಂ.ಪಂಚಮಸಾಲಿ ಟ್ರಸ್ಟ್ , ಯವ ಘಟಕ, ಪಂಚ ಸೇನಾ, ಮಹಿಳಾ ಚನ್ನಮ್ಮ ನ ಬಳಗ , ರೈತ ಘಟಕ, ಎಲ್ ಪಿ ವಿ ಪಿ ಘಟಕ, ವೈದ್ಯಕೀಯ ಘಟಕ, ಸಾಮಾಜಿಕ ಜಾಲತಾಣ ಘಟಕ , ಐಟಿಬಿಟಿ ಘಟಕ ,ಸಾಹಿತ್ಯ ಘಟಕ , ಕಾನೂನು ಘಟಕ, ದಾಸೊಹ ಘಟಕ ವಿವಿಧ ರಾಷ್ಟ್ರೀಯ, ರಾಜ್ಯ ,ಜಿಲ್ಲಾ ,ತಾಲೂಕು ,ನಗರ ಘಟಕಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.


ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್,  ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರು, ಎಚ್ ಎಸ್ ಶಿವಶಂಕರ, ಮಾಜಿ ಮೇಯರ್ ಪುಟ್ಟರಾಜು, ಡಾ.ಬಿ.ಎಸ್.ಪಾಟೀಲ್ ನಾಗರಲ್ ಹುಲಿ,  ಕಿರಣ್ ಪಾಟೀಲ, ಶಿವಕುಮಾರ್ ಮೇಟಿ ಮುಂತಾದವರು ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು