5:49 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಂಗಳೂರು: ಬಿಎಸ್ಸೆನ್ನೆಲ್ ಹೆಸರಿನಲ್ಲಿ ಕೆವೈಸಿ ಕೇಳುವ ನೆಪ; ಆನ್ ಲೈನ್ ಖದೀಮರು ನಿಮ್ಮನ್ನು ವಂಚಿಸಿಯಾರು ಜೋಕೆ

13/03/2022, 22:52

ಮಂಗಳೂರು (reporterkarnataka.com): ತಾನು ಬಿಎಸ್ಸೆನ್ನೆಲ್ ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಅಂತ ಹೇಳಿ ಕೆವೈಸಿ ಸಂಬಂಧಿಸಿದ ದಾಖಲೆ ಕೇಳಿ ನಾಗರಿಕರೊಬ್ಬರನ್ನು ವಂಚಿಸಲು ಯತ್ನಿಸಿದ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಂದಾದಾರರು ಕೆವೈಸಿಗೆ ಅಗತ್ಯ ದಾಖಲೆಗಳನ್ನು ನೀಡದಿದ್ದರೆ, ಸಿಮ್ ಕಾರ್ಡ್ ಅನ್ನು ನಿರ್ಬಂಧಿಸಲಾಗುವುದು ಎಂದು ಕರೆ ಮಾಡಿದಾತ
ಬೆದರಿಸಿದ್ದಾನೆ. ಆತ ಕನ್ನಡದಲ್ಲೇ ಮಾತನಾಡಿದ್ದಾನೆ. ಆದರೆಎಚ್ಚೆತ್ತ ನಾಗರಿಕ ಆತನನ್ನು ಹೆಚ್ಚು ಪ್ರಶ್ನಿಸಲು ಆರಂಭಿಸಿದಾಗ ವಂಚಕ ಅವರನ್ನು ನಿಂದಿಸಿ ಕರೆ ಕಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಆನ್‌ಲೈನ್ ವಂಚಕರು ಕೆವೈಸಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಒಟಿಪಿ ಮತ್ತು ಇತರ ದಾಖಲೆಗಳಂತಹ ವಿವರಗಳನ್ನು ನಾಗರಿಕರಿಗೆ ಕೇಳುವ ಈ ರೀತಿಯ ಅನೇಕ ನಿದರ್ಶನಗಳು ಹಿಂದೆಯೂ ಬೆಳಕಿಗೆ ಬಂದಿವೆ.

ಆದರೆ, ಅವರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದರು. ಆದರೆ ಈಗ ಕೆಲವರು ಕನ್ನಡದಲ್ಲೇ ಮಾತನಾಡುತ್ತಿದ್ದಾರೆ. ವಂಚಕರು ಕನ್ನಡ ಭಾಷೆಯಲ್ಲೇ ಮಾತನಾಡುವ ನೆಪದಲ್ಲಿ ಸಾರ್ವಜನಿಕರನ್ನು ನಂಬಿಸಿ ವಂಚನೆ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು