3:43 AM Saturday31 - January 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮಂಗಳೂರು: ಬಿಎಸ್ಸೆನ್ನೆಲ್ ಹೆಸರಿನಲ್ಲಿ ಕೆವೈಸಿ ಕೇಳುವ ನೆಪ; ಆನ್ ಲೈನ್ ಖದೀಮರು ನಿಮ್ಮನ್ನು ವಂಚಿಸಿಯಾರು ಜೋಕೆ

13/03/2022, 22:52

ಮಂಗಳೂರು (reporterkarnataka.com): ತಾನು ಬಿಎಸ್ಸೆನ್ನೆಲ್ ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಅಂತ ಹೇಳಿ ಕೆವೈಸಿ ಸಂಬಂಧಿಸಿದ ದಾಖಲೆ ಕೇಳಿ ನಾಗರಿಕರೊಬ್ಬರನ್ನು ವಂಚಿಸಲು ಯತ್ನಿಸಿದ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಂದಾದಾರರು ಕೆವೈಸಿಗೆ ಅಗತ್ಯ ದಾಖಲೆಗಳನ್ನು ನೀಡದಿದ್ದರೆ, ಸಿಮ್ ಕಾರ್ಡ್ ಅನ್ನು ನಿರ್ಬಂಧಿಸಲಾಗುವುದು ಎಂದು ಕರೆ ಮಾಡಿದಾತ
ಬೆದರಿಸಿದ್ದಾನೆ. ಆತ ಕನ್ನಡದಲ್ಲೇ ಮಾತನಾಡಿದ್ದಾನೆ. ಆದರೆಎಚ್ಚೆತ್ತ ನಾಗರಿಕ ಆತನನ್ನು ಹೆಚ್ಚು ಪ್ರಶ್ನಿಸಲು ಆರಂಭಿಸಿದಾಗ ವಂಚಕ ಅವರನ್ನು ನಿಂದಿಸಿ ಕರೆ ಕಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಆನ್‌ಲೈನ್ ವಂಚಕರು ಕೆವೈಸಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಒಟಿಪಿ ಮತ್ತು ಇತರ ದಾಖಲೆಗಳಂತಹ ವಿವರಗಳನ್ನು ನಾಗರಿಕರಿಗೆ ಕೇಳುವ ಈ ರೀತಿಯ ಅನೇಕ ನಿದರ್ಶನಗಳು ಹಿಂದೆಯೂ ಬೆಳಕಿಗೆ ಬಂದಿವೆ.

ಆದರೆ, ಅವರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದರು. ಆದರೆ ಈಗ ಕೆಲವರು ಕನ್ನಡದಲ್ಲೇ ಮಾತನಾಡುತ್ತಿದ್ದಾರೆ. ವಂಚಕರು ಕನ್ನಡ ಭಾಷೆಯಲ್ಲೇ ಮಾತನಾಡುವ ನೆಪದಲ್ಲಿ ಸಾರ್ವಜನಿಕರನ್ನು ನಂಬಿಸಿ ವಂಚನೆ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು