8:13 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: ಯೋಗ ಕುರಿತು 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ಸಮಾರೋಪ

14/03/2022, 00:01

ಮಂಗಳೂರು(reporterkarnataka.com): ಕೆನರಾ ಸಂಧ್ಯಾ ಕಾಲೇಜು ಹಾಗೂ ಶ್ರೀ ಪತಂಜಲಿ ಯೋಗ ಪ್ರತಿಷ್ಠಾನ ಮಂಗಳೂರು (ರಿ) ಇದರ ಜಂಟಿ ಆಶ್ರಯದಲ್ಲಿ 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ನ ಸಮಾರೋಪ ಸಮಾರಂಭ ಶನಿವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಖಜಾಂಜಿ ಸಿಎ ವಾಮನ್ ಕಾಮತ್ ಮಾತನಾಡಿ, ಯೋಗದಿಂದ ಆತ್ಮಶಕ್ತಿ, ಮನಸ್ಸಿಗೆ ನೆಮ್ಮದಿ ಗಳಿಸಲು ಸಾಧ್ಯ ಹಾಗೂ ಇದನ್ನು ವಿದ್ಯಾರ್ಥಿ ಜೀವನದಿಂದಲೇ ಬೆಳೆಸಿಕೊಳ್ಳಬೇಕು ಎಂದು ನುಡಿದರು.


ಯೋಗ ಸರ್ಟಿಫಿಕೇಟ್ ಕೋರ್ಸನ ಸಂಪನ್ಮೂಲ ವ್ಯಕ್ತಿ ಏಕನಾಥ್ ಬಾಳಿಗ ಮಾತನಾಡಿ, ಯೋಗಾಭ್ಯಾಸವು ನಮ್ಮ ಜೇವನದ ಅವಿಭಾಜ್ಯ ಅಂಗವಾಗಿರಬೇಕು, ನಿತ್ಯ ಯೋಗಾಭ್ಯಾಸದಿಂದ ಮಾನಸಿಕ ನೆಮ್ಮದಿ ಹಾಗೂ ಶಿಸ್ತುಬದ್ಧ ಜೀವನ ನಡೆಸಲು ಸಾಧ್ಯ ಎಂದರು. ಇಂತಹ ಸರ್ಟಿಫಿಕೇಟ್ ಕೋರ್ಸಿನಿಂದ ಮುಂದಕ್ಕೆ ಹಲವಾರು ಯೋಗಶಿಕ್ಷಕರು ಸಮಾಜಕ್ಕೆ ಸಿಗಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ,ಕೆನರಾ ಸಂಧ್ಯಾ ಕಾಲೇಜಿನ ಸಂಚಾಲಕರಾದ ಸಿಎ ಜಗನ್ನಾಥ ಕಾಮತ್ ವಹಿಸಿ, ಸರ್ಟಿಫಿಕೇಟ್ ಕೋರ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಜೀವನದಲ್ಲಿ ಉನ್ನತ ಸ್ಥಾನ ತಲುಪಲು ಸೂಕ್ತ ಮನೋಭಾವ ಅಗತ್ಯ,ಈ ನಿಟ್ಟಿನಲ್ಲಿ ಇಂತಹ ಸರ್ಟಿಫಿಕೇಟ್ ಕೋರ್ಸಗಳು ಅನುಕೂಲ ಎಂದರು.

ಸರ್ಟಿಫಿಕೇಟ್ ಕೋರ್ಸ್ ಸಂಯೋಜಕಿ, ಉಷಾ ನಾಯಕ್ ಕಾರ್ಯಕ್ರಮದ ಸಂಕ್ಷಿಪ್ತ ವರದಿ ಪ್ರಸ್ತುತ ಪಡಿಸಿದವರು.ಯೋಗ ವಿದ್ಯಾರ್ಥಿಗಳಿಗೆ ಸಂಪನ್ಮೂಲ ಸಾಮಾಗ್ರಿಗಳನ್ನು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಅನಿಲಾ ಅತಿಥಿಗಳನ್ನು ಸ್ವಾಗತಿಸಿದರು.

ಕೆನರಾ ಕಾಲೇಜು ಪ್ರಾಂಶುಪಾಲೆ ಡಾ.ಪ್ರೇಮಲತಾ.ವಿ, ಆಂತರಿಕ ಗುಣಮಟ್ಟ ಸಂಯೋಜಕರಾದ ದೇಜಮ್ಮ, ಹಾರ್ದಿಕ್ ಚೌಹಾನ್, ಪತಂಜಲಿ ಯೋಗ ಪ್ರತಿಷ್ಠಾನದ ಟ್ರಷ್ಟಿ ಪ್ರತಿಭಾ ನಾಯಕ್, ಶಿಕ್ಷಕರಾದ ಪ್ರಭಾ ಎನ್.ವಿ, ಸಂಜನಾ ಮೂರ್ತಿ, ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಯೋಗಗುರು ಏಕನಾಥ್ ಬಾಳಿಗ ಇವರಿಗೆ ಸನ್ಮಾನಿಸಲಾಯಿತು.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಸರ್ಟಿಫಿಕೇಟ್ ಕೋರ್ಸ್ ಸಂಯೋಜಕಿ ಉಷಾ ನಾಯಕ್ ವಂದನಾರ್ಪಣೆಗೈದರು. ಸೀಮಾ ಪ್ರಭು ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು