10:52 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು: ಯೋಗ ಕುರಿತು 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ಸಮಾರೋಪ

14/03/2022, 00:01

ಮಂಗಳೂರು(reporterkarnataka.com): ಕೆನರಾ ಸಂಧ್ಯಾ ಕಾಲೇಜು ಹಾಗೂ ಶ್ರೀ ಪತಂಜಲಿ ಯೋಗ ಪ್ರತಿಷ್ಠಾನ ಮಂಗಳೂರು (ರಿ) ಇದರ ಜಂಟಿ ಆಶ್ರಯದಲ್ಲಿ 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ನ ಸಮಾರೋಪ ಸಮಾರಂಭ ಶನಿವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಖಜಾಂಜಿ ಸಿಎ ವಾಮನ್ ಕಾಮತ್ ಮಾತನಾಡಿ, ಯೋಗದಿಂದ ಆತ್ಮಶಕ್ತಿ, ಮನಸ್ಸಿಗೆ ನೆಮ್ಮದಿ ಗಳಿಸಲು ಸಾಧ್ಯ ಹಾಗೂ ಇದನ್ನು ವಿದ್ಯಾರ್ಥಿ ಜೀವನದಿಂದಲೇ ಬೆಳೆಸಿಕೊಳ್ಳಬೇಕು ಎಂದು ನುಡಿದರು.


ಯೋಗ ಸರ್ಟಿಫಿಕೇಟ್ ಕೋರ್ಸನ ಸಂಪನ್ಮೂಲ ವ್ಯಕ್ತಿ ಏಕನಾಥ್ ಬಾಳಿಗ ಮಾತನಾಡಿ, ಯೋಗಾಭ್ಯಾಸವು ನಮ್ಮ ಜೇವನದ ಅವಿಭಾಜ್ಯ ಅಂಗವಾಗಿರಬೇಕು, ನಿತ್ಯ ಯೋಗಾಭ್ಯಾಸದಿಂದ ಮಾನಸಿಕ ನೆಮ್ಮದಿ ಹಾಗೂ ಶಿಸ್ತುಬದ್ಧ ಜೀವನ ನಡೆಸಲು ಸಾಧ್ಯ ಎಂದರು. ಇಂತಹ ಸರ್ಟಿಫಿಕೇಟ್ ಕೋರ್ಸಿನಿಂದ ಮುಂದಕ್ಕೆ ಹಲವಾರು ಯೋಗಶಿಕ್ಷಕರು ಸಮಾಜಕ್ಕೆ ಸಿಗಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ,ಕೆನರಾ ಸಂಧ್ಯಾ ಕಾಲೇಜಿನ ಸಂಚಾಲಕರಾದ ಸಿಎ ಜಗನ್ನಾಥ ಕಾಮತ್ ವಹಿಸಿ, ಸರ್ಟಿಫಿಕೇಟ್ ಕೋರ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಜೀವನದಲ್ಲಿ ಉನ್ನತ ಸ್ಥಾನ ತಲುಪಲು ಸೂಕ್ತ ಮನೋಭಾವ ಅಗತ್ಯ,ಈ ನಿಟ್ಟಿನಲ್ಲಿ ಇಂತಹ ಸರ್ಟಿಫಿಕೇಟ್ ಕೋರ್ಸಗಳು ಅನುಕೂಲ ಎಂದರು.

ಸರ್ಟಿಫಿಕೇಟ್ ಕೋರ್ಸ್ ಸಂಯೋಜಕಿ, ಉಷಾ ನಾಯಕ್ ಕಾರ್ಯಕ್ರಮದ ಸಂಕ್ಷಿಪ್ತ ವರದಿ ಪ್ರಸ್ತುತ ಪಡಿಸಿದವರು.ಯೋಗ ವಿದ್ಯಾರ್ಥಿಗಳಿಗೆ ಸಂಪನ್ಮೂಲ ಸಾಮಾಗ್ರಿಗಳನ್ನು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಅನಿಲಾ ಅತಿಥಿಗಳನ್ನು ಸ್ವಾಗತಿಸಿದರು.

ಕೆನರಾ ಕಾಲೇಜು ಪ್ರಾಂಶುಪಾಲೆ ಡಾ.ಪ್ರೇಮಲತಾ.ವಿ, ಆಂತರಿಕ ಗುಣಮಟ್ಟ ಸಂಯೋಜಕರಾದ ದೇಜಮ್ಮ, ಹಾರ್ದಿಕ್ ಚೌಹಾನ್, ಪತಂಜಲಿ ಯೋಗ ಪ್ರತಿಷ್ಠಾನದ ಟ್ರಷ್ಟಿ ಪ್ರತಿಭಾ ನಾಯಕ್, ಶಿಕ್ಷಕರಾದ ಪ್ರಭಾ ಎನ್.ವಿ, ಸಂಜನಾ ಮೂರ್ತಿ, ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಯೋಗಗುರು ಏಕನಾಥ್ ಬಾಳಿಗ ಇವರಿಗೆ ಸನ್ಮಾನಿಸಲಾಯಿತು.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಸರ್ಟಿಫಿಕೇಟ್ ಕೋರ್ಸ್ ಸಂಯೋಜಕಿ ಉಷಾ ನಾಯಕ್ ವಂದನಾರ್ಪಣೆಗೈದರು. ಸೀಮಾ ಪ್ರಭು ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು