9:23 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಂಗಳೂರು: ಯೋಗ ಕುರಿತು 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ಸಮಾರೋಪ

14/03/2022, 00:01

ಮಂಗಳೂರು(reporterkarnataka.com): ಕೆನರಾ ಸಂಧ್ಯಾ ಕಾಲೇಜು ಹಾಗೂ ಶ್ರೀ ಪತಂಜಲಿ ಯೋಗ ಪ್ರತಿಷ್ಠಾನ ಮಂಗಳೂರು (ರಿ) ಇದರ ಜಂಟಿ ಆಶ್ರಯದಲ್ಲಿ 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ನ ಸಮಾರೋಪ ಸಮಾರಂಭ ಶನಿವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಖಜಾಂಜಿ ಸಿಎ ವಾಮನ್ ಕಾಮತ್ ಮಾತನಾಡಿ, ಯೋಗದಿಂದ ಆತ್ಮಶಕ್ತಿ, ಮನಸ್ಸಿಗೆ ನೆಮ್ಮದಿ ಗಳಿಸಲು ಸಾಧ್ಯ ಹಾಗೂ ಇದನ್ನು ವಿದ್ಯಾರ್ಥಿ ಜೀವನದಿಂದಲೇ ಬೆಳೆಸಿಕೊಳ್ಳಬೇಕು ಎಂದು ನುಡಿದರು.


ಯೋಗ ಸರ್ಟಿಫಿಕೇಟ್ ಕೋರ್ಸನ ಸಂಪನ್ಮೂಲ ವ್ಯಕ್ತಿ ಏಕನಾಥ್ ಬಾಳಿಗ ಮಾತನಾಡಿ, ಯೋಗಾಭ್ಯಾಸವು ನಮ್ಮ ಜೇವನದ ಅವಿಭಾಜ್ಯ ಅಂಗವಾಗಿರಬೇಕು, ನಿತ್ಯ ಯೋಗಾಭ್ಯಾಸದಿಂದ ಮಾನಸಿಕ ನೆಮ್ಮದಿ ಹಾಗೂ ಶಿಸ್ತುಬದ್ಧ ಜೀವನ ನಡೆಸಲು ಸಾಧ್ಯ ಎಂದರು. ಇಂತಹ ಸರ್ಟಿಫಿಕೇಟ್ ಕೋರ್ಸಿನಿಂದ ಮುಂದಕ್ಕೆ ಹಲವಾರು ಯೋಗಶಿಕ್ಷಕರು ಸಮಾಜಕ್ಕೆ ಸಿಗಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ,ಕೆನರಾ ಸಂಧ್ಯಾ ಕಾಲೇಜಿನ ಸಂಚಾಲಕರಾದ ಸಿಎ ಜಗನ್ನಾಥ ಕಾಮತ್ ವಹಿಸಿ, ಸರ್ಟಿಫಿಕೇಟ್ ಕೋರ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಜೀವನದಲ್ಲಿ ಉನ್ನತ ಸ್ಥಾನ ತಲುಪಲು ಸೂಕ್ತ ಮನೋಭಾವ ಅಗತ್ಯ,ಈ ನಿಟ್ಟಿನಲ್ಲಿ ಇಂತಹ ಸರ್ಟಿಫಿಕೇಟ್ ಕೋರ್ಸಗಳು ಅನುಕೂಲ ಎಂದರು.

ಸರ್ಟಿಫಿಕೇಟ್ ಕೋರ್ಸ್ ಸಂಯೋಜಕಿ, ಉಷಾ ನಾಯಕ್ ಕಾರ್ಯಕ್ರಮದ ಸಂಕ್ಷಿಪ್ತ ವರದಿ ಪ್ರಸ್ತುತ ಪಡಿಸಿದವರು.ಯೋಗ ವಿದ್ಯಾರ್ಥಿಗಳಿಗೆ ಸಂಪನ್ಮೂಲ ಸಾಮಾಗ್ರಿಗಳನ್ನು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಅನಿಲಾ ಅತಿಥಿಗಳನ್ನು ಸ್ವಾಗತಿಸಿದರು.

ಕೆನರಾ ಕಾಲೇಜು ಪ್ರಾಂಶುಪಾಲೆ ಡಾ.ಪ್ರೇಮಲತಾ.ವಿ, ಆಂತರಿಕ ಗುಣಮಟ್ಟ ಸಂಯೋಜಕರಾದ ದೇಜಮ್ಮ, ಹಾರ್ದಿಕ್ ಚೌಹಾನ್, ಪತಂಜಲಿ ಯೋಗ ಪ್ರತಿಷ್ಠಾನದ ಟ್ರಷ್ಟಿ ಪ್ರತಿಭಾ ನಾಯಕ್, ಶಿಕ್ಷಕರಾದ ಪ್ರಭಾ ಎನ್.ವಿ, ಸಂಜನಾ ಮೂರ್ತಿ, ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಯೋಗಗುರು ಏಕನಾಥ್ ಬಾಳಿಗ ಇವರಿಗೆ ಸನ್ಮಾನಿಸಲಾಯಿತು.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಸರ್ಟಿಫಿಕೇಟ್ ಕೋರ್ಸ್ ಸಂಯೋಜಕಿ ಉಷಾ ನಾಯಕ್ ವಂದನಾರ್ಪಣೆಗೈದರು. ಸೀಮಾ ಪ್ರಭು ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು