2:16 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಭಾರತ ಮಾನವೀಯ ಮೌಲ್ಯ, ಶಾಂತಿ- ಅಹಿಂಸೆಯ ಮಹತ್ವ ಇಡೀ ಜಗತ್ತಿಗೆ ಸಾರಿದೆ: ಮೂಡುಬಿದರೆಯಲ್ಲಿ ರಾಜ್ಯಪಾಲ ಗೆಹ್ಲೋಟ್

14/03/2022, 20:37

ಮೂಡುಬಿದರೆ(reporterkarnataka.com): ವಿಶ್ವಕ್ಕೆ ಶಾಂತಿ ಹಾಗೂ ಅಹಿಂಸೆಯ ಸಂದೇಶ ಸಾರಿದ ಭಾರತದ ಕೀರ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.


ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದ 18 ಜೈನ ದೇವಾಲಯಗಳಲ್ಲಿ ಪ್ರಮುಖವಾದ ಸಾವಿರ ಕಂಬಗಳ ಬಸದಿಯಾದ ತ್ರಿಭುವನ ತಿಲಕ ಚೂಡಾಮಣಿ ದೇವಾಲಯಕ್ಕೆ ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ನಮ್ಮ ದೇಶ ಮಾನವೀಯ ಮೌಲ್ಯಗಳು, ಶಾಂತಿ, ಅಹಿಂಸೆಯ ಮಹತ್ವ ಮತ್ತು ಸಹೋದರತ್ವವನ್ನು ಇಡೀ ಜಗತ್ತಿಗೆ ತೋರಿಸಿದೆ. ಭಾರತದ ಸಂಸ್ಕೃತಿ ವಿಶ್ವಕ್ಕೆ ಪ್ರೇರಣೆ ನೀಡಿದೆ. ಭಾರತ ಜಗತ್ತಿಗೆ ಶಾಂತಿ, ಅಹಿಂಸೆ ಮತ್ತು ಸೇವೆಗೆ ಸ್ಫೂರ್ತಿಯನ್ನು ನಿರಂತರವಾಗಿ ನೀಡಲಿದೆ ಎಂಬ ಭರವಸೆ ಇದೆ  ಎಂದರು.

ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ರಾಜ್ಯಪಾಲರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮೂಡಬಿದರೆ ಪುರಸಭೆ ಅಧ್ಯಕ್ಷ ಪ್ರಸಾದ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಠದ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು