10:22 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಂಪ್ಲಿಯ ಕೊಟ್ಟಾಲ್ ರಸ್ತೆಗೆ ಪುರಸಭೆಯಿಂದ  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ

14/03/2022, 21:06

ಕಂಪ್ಲಿ(reporterkarnataka.com): ಕಂಪ್ಲಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಕಂಪ್ಲಿಯ ಪ್ರಮುಖ ರಸ್ತೆ ಸರ್ಕಾರಿ ಸಮುದಾಯ ಆಸ್ಪತ್ರೆಯಿಂದ ಕೊಟ್ಟಾಲ್ ಗೆ ಹೋಗುವ ರಸ್ತೆಗೆ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರಸ್ತೆಯೆಂದು ನಾಮಕರಣ ಮಾಡಲು ನಿರ್ಣಯಿಸಲಾಯಿತು.

 ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಸಹಮತ ನೀಡಿ ನಿರ್ಣಯ ಹೊರಡಿಸಿದ ಕ್ರಮಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಡಾ. ಮೋಹನ್ ಕುಮಾರ್ ದಾನಪ್ಪನವರು ಅಭಿನಂದಿಸಿದ್ದಾರೆ

ರಾಜ್ಯ ಮತ್ತು ದೇಶದ ಪ್ರಖ್ಯಾತ ನಟ ಕಲೆ, ಶಿಕ್ಷಣ ಮತ್ತು ಸಮಾಜ ಸೇವೆಯ ಮೂಲಕ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿ ಇತ್ತೀಚೆಗೆ ಹೃದಯಘಾತದಿಂದ ಆಗಲಿದ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ಸ್ಮರರ್ಣಾಥವಾಗಿ ಕಂಪ್ಲಿಯ ಸರ್ಕಾರಿ ಸಮುದಾಯ ಆಸ್ಪತ್ರೆಯಿಂದ ಕೊಟ್ಟಾಲ್‌ಗೆ ಹೋಗುವ ಪ್ರಮುಖ ರಸ್ತೆಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡುವಂತೆ ದಿನಾಂಕ: 4-11-2021 ರಂದು ಒತ್ತಾಯಿಸಿ ಪುರಸಭೆ ಕಛೇರಿಗೆ ಮನವಿ ಪತ್ರ ಸಲ್ಲಿಸಿದ್ದರು. ಮನವಿ ಪತ್ರಕ್ಕೆ ಸ್ಪಂದಿಸಿ ದಿ: 9-3-2022 ರಂದು ನಡೆದ ಕಂಪ್ಲಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿ ಸರ್ವಸದಸ್ಯರ ಸಹ ಮತ ಪಡೆದು ಕೊಟ್ಟಾಲ್ ರಸ್ತೆಗೆ ಪುನೀತ್ ರ ಹೆಸರನ್ನು ನಾಮಕರಣವನ್ನ ಮಾಡಲು ಅಧಿಕೃತವಾಗಿ ನಿರ್ಣಯ ಹೊರಡಿಸಿರುವುದು ವೈಯಕ್ತಿಕವಾಗಿ ಮತ್ತು ಕಂಪ್ಲಿ ನಗರದ ಪುನೀತ್ ರಾಜ್ ಕುಮಾರ್ ರವರ ಅಪಾರ ಅಭಿಮಾನಿ ಬಳಗಕ್ಕೆ ಸಂತಸ ನೀಡಿದ್ದು ಪುರಸಭೆಯ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳ ಕಾರ್ಯವನ್ನ ಮೆಚ್ಚಿ ಸಿಜಿಸಿ ಡಾ. ಮೋಹನ್ ಕುಮಾರ್ ದಾನಪ್ಪನವರು ಪತ್ರದ ಮೂಲಕ ಅಭಿನಂದನೆ ಸಲ್ಲಿಸಿ, 

ಇದೇ ತಿಂಗಳು ಮಾರ್ಚ್ 17 ರಂದು ಪುನೀತ್ ರಾಜ್ ಕುಮಾರ್ ರವರ ಜನ್ಮದಿನದಂದು ರಸ್ತೆಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ನಾಮವಿರುವ ಫಲಕವನ್ನ ಹಾಕುವ ಅಥವಾ ಈ ರಸ್ತೆಯ ಕೆಲವು ಮಳಿಗೆಗಳಿಗೆ ಪುನೀತ್ ರ ಹೆಸರನ್ನು ಬರೆಸುವ ಮುಖಾಂತರವಾಗಲಿ ಅಥವಾ ಈ ರಸ್ತೆಯ ಪ್ರಮುಖ ಗೋಡೆಗೆ ಹೆಸರನ್ನು ಬರೆಸುವ ಮುಖಾಂತರ ಅಧಿಕೃತವಾಗಿ ಚಾಲನೆಗೊಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು