7:29 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಕಂಪ್ಲಿಯ ಕೊಟ್ಟಾಲ್ ರಸ್ತೆಗೆ ಪುರಸಭೆಯಿಂದ  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ

14/03/2022, 21:06

ಕಂಪ್ಲಿ(reporterkarnataka.com): ಕಂಪ್ಲಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಕಂಪ್ಲಿಯ ಪ್ರಮುಖ ರಸ್ತೆ ಸರ್ಕಾರಿ ಸಮುದಾಯ ಆಸ್ಪತ್ರೆಯಿಂದ ಕೊಟ್ಟಾಲ್ ಗೆ ಹೋಗುವ ರಸ್ತೆಗೆ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರಸ್ತೆಯೆಂದು ನಾಮಕರಣ ಮಾಡಲು ನಿರ್ಣಯಿಸಲಾಯಿತು.

 ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಸಹಮತ ನೀಡಿ ನಿರ್ಣಯ ಹೊರಡಿಸಿದ ಕ್ರಮಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಡಾ. ಮೋಹನ್ ಕುಮಾರ್ ದಾನಪ್ಪನವರು ಅಭಿನಂದಿಸಿದ್ದಾರೆ

ರಾಜ್ಯ ಮತ್ತು ದೇಶದ ಪ್ರಖ್ಯಾತ ನಟ ಕಲೆ, ಶಿಕ್ಷಣ ಮತ್ತು ಸಮಾಜ ಸೇವೆಯ ಮೂಲಕ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿ ಇತ್ತೀಚೆಗೆ ಹೃದಯಘಾತದಿಂದ ಆಗಲಿದ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ಸ್ಮರರ್ಣಾಥವಾಗಿ ಕಂಪ್ಲಿಯ ಸರ್ಕಾರಿ ಸಮುದಾಯ ಆಸ್ಪತ್ರೆಯಿಂದ ಕೊಟ್ಟಾಲ್‌ಗೆ ಹೋಗುವ ಪ್ರಮುಖ ರಸ್ತೆಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡುವಂತೆ ದಿನಾಂಕ: 4-11-2021 ರಂದು ಒತ್ತಾಯಿಸಿ ಪುರಸಭೆ ಕಛೇರಿಗೆ ಮನವಿ ಪತ್ರ ಸಲ್ಲಿಸಿದ್ದರು. ಮನವಿ ಪತ್ರಕ್ಕೆ ಸ್ಪಂದಿಸಿ ದಿ: 9-3-2022 ರಂದು ನಡೆದ ಕಂಪ್ಲಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿ ಸರ್ವಸದಸ್ಯರ ಸಹ ಮತ ಪಡೆದು ಕೊಟ್ಟಾಲ್ ರಸ್ತೆಗೆ ಪುನೀತ್ ರ ಹೆಸರನ್ನು ನಾಮಕರಣವನ್ನ ಮಾಡಲು ಅಧಿಕೃತವಾಗಿ ನಿರ್ಣಯ ಹೊರಡಿಸಿರುವುದು ವೈಯಕ್ತಿಕವಾಗಿ ಮತ್ತು ಕಂಪ್ಲಿ ನಗರದ ಪುನೀತ್ ರಾಜ್ ಕುಮಾರ್ ರವರ ಅಪಾರ ಅಭಿಮಾನಿ ಬಳಗಕ್ಕೆ ಸಂತಸ ನೀಡಿದ್ದು ಪುರಸಭೆಯ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳ ಕಾರ್ಯವನ್ನ ಮೆಚ್ಚಿ ಸಿಜಿಸಿ ಡಾ. ಮೋಹನ್ ಕುಮಾರ್ ದಾನಪ್ಪನವರು ಪತ್ರದ ಮೂಲಕ ಅಭಿನಂದನೆ ಸಲ್ಲಿಸಿ, 

ಇದೇ ತಿಂಗಳು ಮಾರ್ಚ್ 17 ರಂದು ಪುನೀತ್ ರಾಜ್ ಕುಮಾರ್ ರವರ ಜನ್ಮದಿನದಂದು ರಸ್ತೆಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ನಾಮವಿರುವ ಫಲಕವನ್ನ ಹಾಕುವ ಅಥವಾ ಈ ರಸ್ತೆಯ ಕೆಲವು ಮಳಿಗೆಗಳಿಗೆ ಪುನೀತ್ ರ ಹೆಸರನ್ನು ಬರೆಸುವ ಮುಖಾಂತರವಾಗಲಿ ಅಥವಾ ಈ ರಸ್ತೆಯ ಪ್ರಮುಖ ಗೋಡೆಗೆ ಹೆಸರನ್ನು ಬರೆಸುವ ಮುಖಾಂತರ ಅಧಿಕೃತವಾಗಿ ಚಾಲನೆಗೊಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು